ಆರೋಪಿಗಳಾದ ಚಿತ್ರದ ನಿರ್ದೇಶಕ ಶಂಕರ್, ಸಾಹಸ ನಿರ್ದೇಶಕ ವಿನೋದ್ ಕುಮಾರ್ ಹಾಗೂ ಕ್ರೇನ್ ಚಾಲಕ ಮಹದೇವು ಅವರು ಸದ್ಯ ರಾಮನಗರ ಜಿಲ್ಲಾ ಕಾರಾಗೃಹದಲ್ಲಿದ್ದಾರೆ. ಮಂಗಳವಾರ ಅವರ ನ್ಯಾಯಾಂಗ ಬಂಧನದ ಅವಧಿಯು ಮುಕ್ತಾಯಗೊಂಡಿದ್ದು, ವಿಡಿಯೊ ಕಾನ್ಫರೆನ್ಸ್ ಮೂಲಕ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆ.7ರವರೆಗೆ ವಿಸ್ತರಿಸಿ ನ್ಯಾಯಾಧೀಶೆ ಅನುಪಮಾ ಲಕ್ಷ್ಮಿ ಆದೇಶ ನೀಡಿದರು.