ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಕೆ.ಬಿ. ಮಂಜುನಾಥ ಮಾತನಾಡಿ, ‘ಮಳೆ ಬಂದಾಗ ಪ್ರವಾಹದಂತಹ ನೈಸರ್ಗಿಕ ವಿಕೋಪಗಳು ಸಂಭವಿಸುವುದು ಸಹಜ. ನದಿಗಳು ತುಂಬಿ ಹರಿದಾಗ, ಕೆರೆ–ಕಟ್ಟೆಗಳು ಭರ್ತಿಯಾಗಿ ಕೋಡಿ ಬಿದ್ದಾಗ ಅಥವಾ ಅಡ್ಡವಾಗಿ ನಿರ್ಮಿಸಿದ್ದ ಒಡ್ಡು ಒಡೆದು ಹೋದಾಗ ಜನವಸತಿ ಪ್ರದೇಶಗಳಿಗೆ ನೀರು ನುಗ್ಗಿ ಅನಾಹುತ ಸಂಭವಿಸುತ್ತದೆ. ಅಂತಹ ಸ್ಥಿತಿಯನ್ನು ಎದುರಿಸಲು ನಾವು ಸನ್ನದ್ಧರಾಗಿರಬೇಕು’ ಎಂದು ಹೇಳಿದರು.