ರಾಮನಗರ: ಜಿಲ್ಲೆಯಲ್ಲಿ ಶನಿವಾರವೂ ಸಾರಿಗೆ ನೌಕರರ ಮುಷ್ಕರ ಮುಂದುವರಿದಿದೆ. ಕೆಎಸ್ ಆರ್ ಟಿಸಿ ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.
ಬೆಂಗಳೂರು-ಮೈಸೂರು ನಡುವೆ ಸಂಚರಿಸುವ ಪ್ರಯಾಣಿಕರು ಬಹುವಾಗಿ ಕೆಎಸ್ ಆರ್ ಟಿಸಿ ಬಸ್ ಗಳನ್ನೇ ನಂಬಿದ್ದಾರೆ. ರೈಲುಗಳ ಸಂಚಾರವು ಸೀಮಿತವಾಗಿದೆ. ಬಸ್ ಸಂಚಾರ ಸ್ಥಗಿತಗೊಂಡ ಕಾರಣ ಖಾಸಗಿ ವಾಹನಗಳ ಓಡಾಟ ಹೆಚ್ಚಿದೆ.