<p><strong>ಚನ್ನಪಟ್ಟಣ</strong>: ಸೋಮವಾರ (ನ.8) ನಡೆಯಲಿರುವ ಇಲ್ಲಿನ ನಗರಸಭಾ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಆಯ್ಕೆ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಸದಸ್ಯರಿಗೆ ಪ್ರವಾಸ ಭಾಗ್ಯ ದೊರೆತಿರುವುದಾಗಿ ತಿಳಿದು<br />ಬಂದಿದೆ.</p>.<p>ಸದಸ್ಯರಲ್ಲಿ ಯಾವುದೇ ಗೊಂದಲ ಉಂಟಾಗದಂತೆ ನೋಡಿಕೊಳ್ಳುವ ಉದ್ದೇಶದಿಂದ ಎಲ್ಲಾ 16 ಸದಸ್ಯರನ್ನು ಶಾಸಕ ಕುಮಾರಸ್ವಾಮಿ ಸೂಚನೆ ಮೇರೆಗೆ ಪ್ರವಾಸಕ್ಕೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.</p>.<p>31 ಸದಸ್ಯ ಬಲದ ನಗರಸಭೆಯಲ್ಲಿ 16 ಜೆಡಿಎಸ್ ಸದಸ್ಯರು, 7 ಕಾಂಗ್ರೆಸ್ ಹಾಗೂ 7 ಬಿಜೆಪಿ ಸದಸ್ಯರು, ಒಬ್ಬರು ಪಕ್ಷೇತರರು ವಿಜೇತರಾಗಿದ್ದಾರೆ. ಜೆಡಿಎಸ್ ಸರಳ ಬಹುಮತದೊಂದಿಗೆ ಅಧಿಕಾರ ಹಿಡಿದಿದ್ದು, ಯಾವುದೇ ಗೊಂದಲಕ್ಕೆ ಆಸ್ಪದ ನೀಡದೆ ಅಧಿಕಾರ ಹಿಡಿಯುವ ಉದ್ದೇಶದಿಂದ ಜೆಡಿಎಸ್ ಸದಸ್ಯರನ್ನು ಒಟ್ಟಾಗಿ ಹಿಡಿದಿಡುವ ಪ್ರಯತ್ನದ ಹಿನ್ನೆಲೆಯಲ್ಲಿ ಈ ಪ್ರವಾಸ ಕರುಣಿಸಲಾಗಿದೆ ಎಂದು ತಿಳಿದುಬಂದಿದೆ.</p>.<p>ನಗರಸಭಾ ಅಧಿಕಾರ ಹಿಡಿಯುವ ಉದ್ದೇಶ ಹಾಗೂ ಜೆಡಿಎಸ್ ಅನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಕಾಂಗ್ರೆಸ್ ಹಾಗೂ ಬಿಜೆಪಿ ಮೈತ್ರಿ ಮಾಡಿಕೊಳ್ಳಲು ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿವೆ ಎಂಬ ಸುದ್ದಿಗಳು ಹರಿಡಾಡುತ್ತಿವೆ. ಈ ಹಿನ್ನೆಲೆಯಲ್ಲಿ ಯಾವುದೇ ಗೊಂದಲಕ್ಕೆ ಅವಕಾಶ ನೀಡಬಾರದು ಎನ್ನುವ ಉದ್ದೇಶದಿಂದ ಪ್ರವಾಸಕ್ಕೆ ಕರೆದೊಯ್ಯಲಾಗಿದೆ. ಚುನಾವಣೆಯ ದಿನ ಪಕ್ಷದ ಸದಸ್ಯರೆಲ್ಲರೂ ಒಟ್ಟಾಗಿ ನಗರಸಭೆಗೆ ಆಗಮಿಸಲಿದ್ದಾರೆ ಎಂದು ಜೆಡಿಎಸ್ ಮುಖಂಡರೊಬ್ಬರು<br />ತಿಳಿಸಿದ್ದಾರೆ.</p>.<p>ಬಿಜೆಪಿ ಮುಖಂಡ ಸಿ.ಪಿ. ಯೋಗೇಶ್ವರ್ಗೆ ಕಾಂಗ್ರೆಸ್ ಗಾಳ ಹಾಕುತ್ತಿದೆ ಎಂಬ ಸುದ್ದಿಗಳು ಹರಿದಾಡುತ್ತಿರುವ ಬೆನ್ನಲ್ಲೆ ನಗರಸಭೆಯ ಅಧಿಕಾರ ಹಿಡಿಯಲು ಕಾಂಗ್ರೆಸ್, ಬಿಜೆಪಿ ಕಸರತ್ತು ಆರಂಭಿಸಿರುವ ಸುದ್ದಿಗಳು ಕೇಳಿಬಂದಿವೆ. ಕಾಂಗ್ರೆಸ್ನ 7 ಸದಸ್ಯರು, ಬಿಜೆಪಿಯ 7 ಸದಸ್ಯರು, ಒಬ್ಬ ಪಕ್ಷೇತರ ಸದಸ್ಯನ ಬೆಂಬಲ ಪಡೆದರೆ ಒಟ್ಟು 15 ಸ್ಥಾನಗಳಾಗುತ್ತವೆ.</p>.<p>ಒಬ್ಬ ಅಥವಾ ಇಬ್ಬರು ಜೆಡಿಎಸ್ ಸದಸ್ಯರ ಬೆಂಬಲ ಸಾಧಿಸಿದರೆ ಬಹುಮತದೊಂದಿಗೆ ನಗರಸಭೆಯ ಅಧಿಕಾರ ಪಡೆಯಬಹುದು. ಆ ಮೂಲಕ ಕುಮಾರಸ್ವಾಮಿಗೆ ಮುಖಭಂಗ ಉಂಟು ಮಾಡಬಹುದು ಎನ್ನುವುದು ಕಾಂಗ್ರೆಸ್ ಹಾಗೂ ಬಿಜೆಪಿ ಲೆಕ್ಕಾಚಾರವಾಗಿದೆ ಎಂದು ತಿಳಿದುಬಂದಿದೆ.</p>.<p>ಇದು ಎಷ್ಟರಮಟ್ಟಿಗೆ ಸಫಲವಾಗುವುದು ಎನ್ನುವುದಕ್ಕೆ ಸೋಮವಾರದ ಚುನಾವಣೆ ಉತ್ತರ ನೀಡಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ</strong>: ಸೋಮವಾರ (ನ.8) ನಡೆಯಲಿರುವ ಇಲ್ಲಿನ ನಗರಸಭಾ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಆಯ್ಕೆ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಸದಸ್ಯರಿಗೆ ಪ್ರವಾಸ ಭಾಗ್ಯ ದೊರೆತಿರುವುದಾಗಿ ತಿಳಿದು<br />ಬಂದಿದೆ.</p>.<p>ಸದಸ್ಯರಲ್ಲಿ ಯಾವುದೇ ಗೊಂದಲ ಉಂಟಾಗದಂತೆ ನೋಡಿಕೊಳ್ಳುವ ಉದ್ದೇಶದಿಂದ ಎಲ್ಲಾ 16 ಸದಸ್ಯರನ್ನು ಶಾಸಕ ಕುಮಾರಸ್ವಾಮಿ ಸೂಚನೆ ಮೇರೆಗೆ ಪ್ರವಾಸಕ್ಕೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.</p>.<p>31 ಸದಸ್ಯ ಬಲದ ನಗರಸಭೆಯಲ್ಲಿ 16 ಜೆಡಿಎಸ್ ಸದಸ್ಯರು, 7 ಕಾಂಗ್ರೆಸ್ ಹಾಗೂ 7 ಬಿಜೆಪಿ ಸದಸ್ಯರು, ಒಬ್ಬರು ಪಕ್ಷೇತರರು ವಿಜೇತರಾಗಿದ್ದಾರೆ. ಜೆಡಿಎಸ್ ಸರಳ ಬಹುಮತದೊಂದಿಗೆ ಅಧಿಕಾರ ಹಿಡಿದಿದ್ದು, ಯಾವುದೇ ಗೊಂದಲಕ್ಕೆ ಆಸ್ಪದ ನೀಡದೆ ಅಧಿಕಾರ ಹಿಡಿಯುವ ಉದ್ದೇಶದಿಂದ ಜೆಡಿಎಸ್ ಸದಸ್ಯರನ್ನು ಒಟ್ಟಾಗಿ ಹಿಡಿದಿಡುವ ಪ್ರಯತ್ನದ ಹಿನ್ನೆಲೆಯಲ್ಲಿ ಈ ಪ್ರವಾಸ ಕರುಣಿಸಲಾಗಿದೆ ಎಂದು ತಿಳಿದುಬಂದಿದೆ.</p>.<p>ನಗರಸಭಾ ಅಧಿಕಾರ ಹಿಡಿಯುವ ಉದ್ದೇಶ ಹಾಗೂ ಜೆಡಿಎಸ್ ಅನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಕಾಂಗ್ರೆಸ್ ಹಾಗೂ ಬಿಜೆಪಿ ಮೈತ್ರಿ ಮಾಡಿಕೊಳ್ಳಲು ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿವೆ ಎಂಬ ಸುದ್ದಿಗಳು ಹರಿಡಾಡುತ್ತಿವೆ. ಈ ಹಿನ್ನೆಲೆಯಲ್ಲಿ ಯಾವುದೇ ಗೊಂದಲಕ್ಕೆ ಅವಕಾಶ ನೀಡಬಾರದು ಎನ್ನುವ ಉದ್ದೇಶದಿಂದ ಪ್ರವಾಸಕ್ಕೆ ಕರೆದೊಯ್ಯಲಾಗಿದೆ. ಚುನಾವಣೆಯ ದಿನ ಪಕ್ಷದ ಸದಸ್ಯರೆಲ್ಲರೂ ಒಟ್ಟಾಗಿ ನಗರಸಭೆಗೆ ಆಗಮಿಸಲಿದ್ದಾರೆ ಎಂದು ಜೆಡಿಎಸ್ ಮುಖಂಡರೊಬ್ಬರು<br />ತಿಳಿಸಿದ್ದಾರೆ.</p>.<p>ಬಿಜೆಪಿ ಮುಖಂಡ ಸಿ.ಪಿ. ಯೋಗೇಶ್ವರ್ಗೆ ಕಾಂಗ್ರೆಸ್ ಗಾಳ ಹಾಕುತ್ತಿದೆ ಎಂಬ ಸುದ್ದಿಗಳು ಹರಿದಾಡುತ್ತಿರುವ ಬೆನ್ನಲ್ಲೆ ನಗರಸಭೆಯ ಅಧಿಕಾರ ಹಿಡಿಯಲು ಕಾಂಗ್ರೆಸ್, ಬಿಜೆಪಿ ಕಸರತ್ತು ಆರಂಭಿಸಿರುವ ಸುದ್ದಿಗಳು ಕೇಳಿಬಂದಿವೆ. ಕಾಂಗ್ರೆಸ್ನ 7 ಸದಸ್ಯರು, ಬಿಜೆಪಿಯ 7 ಸದಸ್ಯರು, ಒಬ್ಬ ಪಕ್ಷೇತರ ಸದಸ್ಯನ ಬೆಂಬಲ ಪಡೆದರೆ ಒಟ್ಟು 15 ಸ್ಥಾನಗಳಾಗುತ್ತವೆ.</p>.<p>ಒಬ್ಬ ಅಥವಾ ಇಬ್ಬರು ಜೆಡಿಎಸ್ ಸದಸ್ಯರ ಬೆಂಬಲ ಸಾಧಿಸಿದರೆ ಬಹುಮತದೊಂದಿಗೆ ನಗರಸಭೆಯ ಅಧಿಕಾರ ಪಡೆಯಬಹುದು. ಆ ಮೂಲಕ ಕುಮಾರಸ್ವಾಮಿಗೆ ಮುಖಭಂಗ ಉಂಟು ಮಾಡಬಹುದು ಎನ್ನುವುದು ಕಾಂಗ್ರೆಸ್ ಹಾಗೂ ಬಿಜೆಪಿ ಲೆಕ್ಕಾಚಾರವಾಗಿದೆ ಎಂದು ತಿಳಿದುಬಂದಿದೆ.</p>.<p>ಇದು ಎಷ್ಟರಮಟ್ಟಿಗೆ ಸಫಲವಾಗುವುದು ಎನ್ನುವುದಕ್ಕೆ ಸೋಮವಾರದ ಚುನಾವಣೆ ಉತ್ತರ ನೀಡಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>