ರಾಮನಗರ: ಕನಕಪುರ ತಾಲ್ಲೂಕಿನ ಭೂಹಳ್ಳಿಯ ಮನೆಯೊಂದರಲ್ಲಿ ನಿಧಿ ಆಸೆಗಾಗಿ ಪೂಜೆ ಸಲ್ಲಿಸಿ ವಾಮಾಚಾರ ನಡೆಸುತ್ತಿದ್ದವರನ್ನು ಮಂಗಳವಾರ ತಡರಾತ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಒಟ್ಟು 13 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಇವರ ಜೊತೆಗೆ ನಾಲ್ಕು ವರ್ಷದ ಹೆಣ್ಣು ಮಗುವೂ ಇದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.
ಗ್ರಾಮದ ಮನೆಯಲ್ಲಿ ಕೆಲವು ತಿಂಗಳಿಂದ ರಾತ್ರೋ ರಾತ್ರಿ ಪೂಜೆ ನಡೆಯುತ್ತಿತ್ತು. ಮನೆಯಲ್ಲೆಲ್ಲ ಗುಂಡಿಗಳನ್ನು ಅಗೆಯಲಾಗಿತ್ತು. ಹೊರ ಜಿಲ್ಲೆಗಳಿಂದ ಬಂದು ಇಲ್ಲಿ ಆಗಾಗ್ಗೆ ಪೂಜೆ ನೆರವೇರಿಸಿ ಹೋಗುತ್ತಿದ್ದರು ಎಂದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮನೆಯ ಮಾಲೀಕರನ್ನೂ ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಸಾತನೂರು ಠಾಣೆ ಸಿಬ್ಬಂದಿ ಈ ದಾಳಿ ನಡೆಸಿದರು.