ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನಗರ: ನಿಧಿ ಆಸೆಗಾಗಿ ಪೂಜೆ ಸಲ್ಲಿಸುತ್ತಿದ್ದವರು ವಶಕ್ಕೆ

Last Updated 9 ನವೆಂಬರ್ 2021, 20:40 IST
ಅಕ್ಷರ ಗಾತ್ರ

ರಾಮನಗರ: ಕನಕಪುರ ತಾಲ್ಲೂಕಿನ ಭೂಹಳ್ಳಿಯ ಮನೆಯೊಂದರಲ್ಲಿ‌ ನಿಧಿ ಆಸೆಗಾಗಿ ಪೂಜೆ ಸಲ್ಲಿಸಿ ವಾಮಾಚಾರ ನಡೆಸುತ್ತಿದ್ದವರನ್ನು ಮಂಗಳವಾರ ತಡರಾತ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಒಟ್ಟು 13 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಇವರ ಜೊತೆಗೆ ನಾಲ್ಕು ವರ್ಷದ ಹೆಣ್ಣು ಮಗುವೂ ಇದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

ಗ್ರಾಮದ ಮನೆಯಲ್ಲಿ ಕೆಲವು ತಿಂಗಳಿಂದ ರಾತ್ರೋ ರಾತ್ರಿ ಪೂಜೆ ನಡೆಯುತ್ತಿತ್ತು. ಮನೆಯಲ್ಲೆಲ್ಲ ಗುಂಡಿಗಳನ್ನು ಅಗೆಯಲಾಗಿತ್ತು. ಹೊರ ಜಿಲ್ಲೆಗಳಿಂದ ಬಂದು ಇಲ್ಲಿ ಆಗಾಗ್ಗೆ ಪೂಜೆ ನೆರವೇರಿಸಿ ಹೋಗುತ್ತಿದ್ದರು ಎಂದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮನೆಯ ಮಾಲೀಕರನ್ನೂ ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಸಾತನೂರು ಠಾಣೆ ಸಿಬ್ಬಂದಿ ಈ ದಾಳಿ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT