<p><strong>ಕನಕಪುರ</strong>: ಸರ್ಕಾರಿ ಗೋಮಾಳದಲ್ಲಿದ್ದ ಮರಗಳನ್ನು ಕಡಿದು ಒತ್ತುವರಿ ಮಾಡಿಕೊಂಡಿರುವ ವ್ಯಕ್ತಿಯ ವಿರುದ್ಧ ದೂರು ನೀಡಿ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದರೂ ಅರಣ್ಯ ಅಧಿಕಾರಿಗಳು ವಿಳಂಬವಾಗಿ ಪ್ರಕರಣ ದಾಖಲಿಸಿದ್ದಾರೆ. ಆ ವ್ಯಕ್ತಿಯೊಂದಿಗೆ ಶಾಮೀಲಾಗಿ ಕರ್ತವ್ಯಲೋಪ ಎಸಗಿದ್ದಾರೆ ಎಂದು ಶಿವನೇಗೌಡನದೊಡ್ಡಿಯ ಶಿವಕುಮಾರ್ ಆರೋಪಿಸಿದ್ದಾರೆ.</p>.<p>ತಾಲ್ಲೂಕಿನ ಉಯ್ಯಂಬಳ್ಳಿ ಹೋಬಳಿಯ ಶಿವನೇಗೌಡನದೊಡ್ಡಿ ಗ್ರಾಮದಲ್ಲಿ ಅರೆಕೊಪ್ಪ ಸರ್ವೆ ನಂಬರ್ 95ರಲ್ಲಿ 4 ಮರಗಳನ್ನು ಶಿವರಾಜು ಎಂಬುವರು ಜೂನ್ 24ರಂದು ಜೆಸಿಬಿಯಿಂದ ಉರುಳಿಸಿ ನಾಶ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಉಪ ವಲಯ ಅರಣ್ಯ ಅಧಿಕಾರಿಗೆ ಅಂದೇ ವಾಟ್ಸ್ಆ್ಯಪ್ ಮೂಲಕ ದೂರು ಕೊಟ್ಟಿದ್ದರೂ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಶಿವಕುಮಾರ್ ದೂರಿದ್ದಾರೆ.</p>.<p>ಅರಣ್ಯಾಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿ ಮಹಜರು ಮಾಡಿ ಪ್ರಕರಣ ದಾಖಲಿಸಿರುವುದಾಗಿ ತಿಳಿಸಿದ್ದರು. ಪ್ರಕರಣದ ಎಫ್ಐಆರ್ ಕೊಡುವಂತೆ ಕೇಳಿದ್ದೆ. ಅದಕ್ಕೆ ಅವರು ಆ ರೀತಿ ಕೊಡಲು ಬರುವುದಿಲ್ಲ. ಆರ್ಟಿಐ ಮೂಲಕ ಪಡೆಯುವಂತೆ ಹೇಳಿದ್ದರಿಂದ ಜೂನ್ 29ರಂದು ಅರ್ಜಿ ಸಲ್ಲಿಸಿದ್ದೆ. ಜುಲೈ 1ರಂದು ಎಫ್ಐಆರ್ ಪ್ರತಿ ನೀಡಿದ್ದಾರೆ ಎಂದು<br />ತಿಳಿಸಿದ್ದಾರೆ.</p>.<p>‘ವಿಳಂಬವಾಗಿ ಪ್ರಕರಣ ದಾಖಲಿಸಿದ್ದುಕರ್ತವ್ಯಲೋಪ ಎಸಗಿರುವ ಎಆರ್ಎಫ್ಒ ಮತ್ತು ಆರ್ಎಫ್ಒ ವಿರುದ್ಧ ಎಸಿಎಫ್, ಡಿಸಿಎಫ್ಗೆ ಇಂದು ಆನ್ಲೈನ್ ಮೂಲಕ ದೂರು ನೀಡಲಾಗುವುದು’ ಎಂದು ತಿಳಿಸಿದರು.</p>.<p>‘ಶಿವನೇಗೌಡನದೊಡ್ಡಿ ಗ್ರಾಮದಲ್ಲಿ ಮರ ಕಡಿಯುತ್ತಿರುವ ಸಂಬಂಧ ಶಿವಕುಮಾರ್ ಎಂಬುದು ವಾಟ್ಸ್ಆ್ಯಪ್ ಮೂಲಕ ಮಾಹಿತಿ ನೀಡಿದ್ದರು. ಅಧಿಕಾರಿಗಳು ಸ್ಥಳಕ್ಕೆ ಹೋಗಿ ಮಹಜರು ಮಾಡಿ ಮರವನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆ ಜಾಗ ಖಾಸಗಿಯದ್ದೇ ಅಥವಾ ಸರ್ಕಾರಿ ಸ್ಥಳವೇ ಎಂದು ಕಂದಾಯ ಇಲಾಖೆಯಿಂದ ಪರಿಶೀಲಿಸಲಾಗುವುದು. ಬಳಿಕ ಮುಂದಿನ ಕ್ರಮ ಕೈಗೊಳ್ಳಲಿದ್ದೇವೆ. ಆರೋಪಿಯನ್ನು ರಕ್ಷಣೆ ಮಾಡುತ್ತಿಲ್ಲ. ಪ್ರಕರಣ ದಾಖಲಿಸಲು ವಿಳಂಬ ಮಾಡುತ್ತಿದ್ದಾರೆ ಎಂದು ಶಿವಕುಮಾರ್ ಮಾಡಿರುವ ಆರೋಪ ಸತ್ಯಕ್ಕೆ ದೂರವಾದುದು’ ಎಂದು ಕನಕಪುರದವಲಯ ಅರಣ್ಯಾಧಿಕಾರಿದಾಳೇಶ್<br />ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ</strong>: ಸರ್ಕಾರಿ ಗೋಮಾಳದಲ್ಲಿದ್ದ ಮರಗಳನ್ನು ಕಡಿದು ಒತ್ತುವರಿ ಮಾಡಿಕೊಂಡಿರುವ ವ್ಯಕ್ತಿಯ ವಿರುದ್ಧ ದೂರು ನೀಡಿ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದರೂ ಅರಣ್ಯ ಅಧಿಕಾರಿಗಳು ವಿಳಂಬವಾಗಿ ಪ್ರಕರಣ ದಾಖಲಿಸಿದ್ದಾರೆ. ಆ ವ್ಯಕ್ತಿಯೊಂದಿಗೆ ಶಾಮೀಲಾಗಿ ಕರ್ತವ್ಯಲೋಪ ಎಸಗಿದ್ದಾರೆ ಎಂದು ಶಿವನೇಗೌಡನದೊಡ್ಡಿಯ ಶಿವಕುಮಾರ್ ಆರೋಪಿಸಿದ್ದಾರೆ.</p>.<p>ತಾಲ್ಲೂಕಿನ ಉಯ್ಯಂಬಳ್ಳಿ ಹೋಬಳಿಯ ಶಿವನೇಗೌಡನದೊಡ್ಡಿ ಗ್ರಾಮದಲ್ಲಿ ಅರೆಕೊಪ್ಪ ಸರ್ವೆ ನಂಬರ್ 95ರಲ್ಲಿ 4 ಮರಗಳನ್ನು ಶಿವರಾಜು ಎಂಬುವರು ಜೂನ್ 24ರಂದು ಜೆಸಿಬಿಯಿಂದ ಉರುಳಿಸಿ ನಾಶ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಉಪ ವಲಯ ಅರಣ್ಯ ಅಧಿಕಾರಿಗೆ ಅಂದೇ ವಾಟ್ಸ್ಆ್ಯಪ್ ಮೂಲಕ ದೂರು ಕೊಟ್ಟಿದ್ದರೂ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಶಿವಕುಮಾರ್ ದೂರಿದ್ದಾರೆ.</p>.<p>ಅರಣ್ಯಾಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿ ಮಹಜರು ಮಾಡಿ ಪ್ರಕರಣ ದಾಖಲಿಸಿರುವುದಾಗಿ ತಿಳಿಸಿದ್ದರು. ಪ್ರಕರಣದ ಎಫ್ಐಆರ್ ಕೊಡುವಂತೆ ಕೇಳಿದ್ದೆ. ಅದಕ್ಕೆ ಅವರು ಆ ರೀತಿ ಕೊಡಲು ಬರುವುದಿಲ್ಲ. ಆರ್ಟಿಐ ಮೂಲಕ ಪಡೆಯುವಂತೆ ಹೇಳಿದ್ದರಿಂದ ಜೂನ್ 29ರಂದು ಅರ್ಜಿ ಸಲ್ಲಿಸಿದ್ದೆ. ಜುಲೈ 1ರಂದು ಎಫ್ಐಆರ್ ಪ್ರತಿ ನೀಡಿದ್ದಾರೆ ಎಂದು<br />ತಿಳಿಸಿದ್ದಾರೆ.</p>.<p>‘ವಿಳಂಬವಾಗಿ ಪ್ರಕರಣ ದಾಖಲಿಸಿದ್ದುಕರ್ತವ್ಯಲೋಪ ಎಸಗಿರುವ ಎಆರ್ಎಫ್ಒ ಮತ್ತು ಆರ್ಎಫ್ಒ ವಿರುದ್ಧ ಎಸಿಎಫ್, ಡಿಸಿಎಫ್ಗೆ ಇಂದು ಆನ್ಲೈನ್ ಮೂಲಕ ದೂರು ನೀಡಲಾಗುವುದು’ ಎಂದು ತಿಳಿಸಿದರು.</p>.<p>‘ಶಿವನೇಗೌಡನದೊಡ್ಡಿ ಗ್ರಾಮದಲ್ಲಿ ಮರ ಕಡಿಯುತ್ತಿರುವ ಸಂಬಂಧ ಶಿವಕುಮಾರ್ ಎಂಬುದು ವಾಟ್ಸ್ಆ್ಯಪ್ ಮೂಲಕ ಮಾಹಿತಿ ನೀಡಿದ್ದರು. ಅಧಿಕಾರಿಗಳು ಸ್ಥಳಕ್ಕೆ ಹೋಗಿ ಮಹಜರು ಮಾಡಿ ಮರವನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆ ಜಾಗ ಖಾಸಗಿಯದ್ದೇ ಅಥವಾ ಸರ್ಕಾರಿ ಸ್ಥಳವೇ ಎಂದು ಕಂದಾಯ ಇಲಾಖೆಯಿಂದ ಪರಿಶೀಲಿಸಲಾಗುವುದು. ಬಳಿಕ ಮುಂದಿನ ಕ್ರಮ ಕೈಗೊಳ್ಳಲಿದ್ದೇವೆ. ಆರೋಪಿಯನ್ನು ರಕ್ಷಣೆ ಮಾಡುತ್ತಿಲ್ಲ. ಪ್ರಕರಣ ದಾಖಲಿಸಲು ವಿಳಂಬ ಮಾಡುತ್ತಿದ್ದಾರೆ ಎಂದು ಶಿವಕುಮಾರ್ ಮಾಡಿರುವ ಆರೋಪ ಸತ್ಯಕ್ಕೆ ದೂರವಾದುದು’ ಎಂದು ಕನಕಪುರದವಲಯ ಅರಣ್ಯಾಧಿಕಾರಿದಾಳೇಶ್<br />ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>