ರಾಮನಗರ: ಇಲ್ಲಿನ ಜಿಲ್ಲಾ ಪಂಚಾಯಿತಿ ಕಿರು ಸಭಾಂಗಣದಲ್ಲಿ ಬುಧವಾರ 'ಪ್ರಜಾವಾಣಿ' ಪತ್ರಿಕೆ ವತಿಯಿಂದ ಕೋವಿಡ್ ವಾರಿಯರ್ ಗಳಿಗೆ ಗೌರವ ಅರ್ಪಣೆ ಕಾರ್ಯಕ್ರಮದ ಯೋಜಿಸಲಾಗಿತ್ತು.
ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಕೋವಿಡ್ ಆಸ್ಪತ್ರೆಯ ವೈದ್ಯ ಡಾ. ನರಸಿಂಹ ಮೂರ್ತಿ, ಶುಶ್ರೂಷಕ ಅಧಿಕಾರಿ ಹರಿಣಾಕ್ಷಿ ಹಾಗೂ ಜಿಲ್ಲಾಸ್ಪತ್ರೆಯ ಆಂಬುಲೆನ್ಸ್ ಚಾಲಕ ಸತೀಶ್ ಅವರನ್ನು ಸನ್ಮಾನಿಸಿದರು.
ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಇಕ್ರಂ, ಜಿ.ಪಂ. ಉಪಾಧ್ಯಕ್ಷೆ ಜಯರತ್ನಾ ಇದ್ದರು