<p><strong>ಕುದೂರು</strong>: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ-75 ಗುಡೇಮಾರನಹಳ್ಳಿ ಹ್ಯಾಂಡ್ ಪೋಸ್ಟ್ ಬಳಿ ನಿಂತಿದ್ದ ಟ್ರ್ಯಾಕ್ಟರ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಇಬ್ಬರು ಯುವಕರು ಮೃತಪಟ್ಟ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ.</p>.<p>ಮೃತರನ್ನು ಬೆಂಗಳೂರಿನ ಮಹಾಲಕ್ಷ್ಮಿಲೇಔಟ್ ನಿವಾಸಿಗಳಾದ ಚಂದನ್ (22) ಮತ್ತು ಮಹೇಶ್ (22) ಎಂದು ಗುರುತಿಸಲಾಗಿದೆ. ಇವರಿಬ್ಬರು ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳು.</p>.<p>ಬೆಂಗಳೂರಿನಿಂದ ಕುಣಿಗಲ್ ಕಡೆಗೆ ಬೈಕ್ ರೈಡ್ ಹೊರಟಿದ್ದ ಯುವಕರು, ಗುಡೇಮಾರನಹಳ್ಳಿ ಬಳಿ ಹೆದ್ದಾರಿಯಲ್ಲಿ ನಿಂತಿದ್ದ ಟ್ರ್ಯಾಕ್ಟರ್ಗೆ ಡಿಕ್ಕಿ ಹೊಡೆದಿದ್ದಾರೆ. ಬೈಕ್ ಚಲಾಯಿಸುತ್ತಿದ್ದ ಚಂದನ್ ತಲೆಗೆ ಗಂಭೀರ ಗಾಯವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತೀವ್ರ ಗಾಯಗೊಂಡ ಮಹೇಶ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ.</p>.<p>ಕುದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುದೂರು</strong>: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ-75 ಗುಡೇಮಾರನಹಳ್ಳಿ ಹ್ಯಾಂಡ್ ಪೋಸ್ಟ್ ಬಳಿ ನಿಂತಿದ್ದ ಟ್ರ್ಯಾಕ್ಟರ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಇಬ್ಬರು ಯುವಕರು ಮೃತಪಟ್ಟ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ.</p>.<p>ಮೃತರನ್ನು ಬೆಂಗಳೂರಿನ ಮಹಾಲಕ್ಷ್ಮಿಲೇಔಟ್ ನಿವಾಸಿಗಳಾದ ಚಂದನ್ (22) ಮತ್ತು ಮಹೇಶ್ (22) ಎಂದು ಗುರುತಿಸಲಾಗಿದೆ. ಇವರಿಬ್ಬರು ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳು.</p>.<p>ಬೆಂಗಳೂರಿನಿಂದ ಕುಣಿಗಲ್ ಕಡೆಗೆ ಬೈಕ್ ರೈಡ್ ಹೊರಟಿದ್ದ ಯುವಕರು, ಗುಡೇಮಾರನಹಳ್ಳಿ ಬಳಿ ಹೆದ್ದಾರಿಯಲ್ಲಿ ನಿಂತಿದ್ದ ಟ್ರ್ಯಾಕ್ಟರ್ಗೆ ಡಿಕ್ಕಿ ಹೊಡೆದಿದ್ದಾರೆ. ಬೈಕ್ ಚಲಾಯಿಸುತ್ತಿದ್ದ ಚಂದನ್ ತಲೆಗೆ ಗಂಭೀರ ಗಾಯವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತೀವ್ರ ಗಾಯಗೊಂಡ ಮಹೇಶ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ.</p>.<p>ಕುದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>