ಶನಿವಾರ ಒಟ್ಟು 716 ವರದಿಗಳು ನಕರಾತ್ಮಕ ಫಲಿತಾಂಶ ಬಂದಿದ್ದು, ಇಬ್ಬರಿಗೆ ಮಾತ್ರ ಕೊರೊನಾ ಸೋಂಕು ತಗುಲಿದೆ. ಕನಕಪುರ ತಾಲ್ಲೂಕಿನ ವ್ಯಕ್ತಿಯೊಬ್ಬರು ಬಿಡದಿಯ ಕಾರ್ಖಾನೆ ಒಂದರಲ್ಲಿ ಕೆಲಸ ಮಾಡುತ್ತಿದ್ದು, ಅವರಲ್ಲಿ ಸೋಂಕು ತಗುಲಿದೆ. ಮತ್ತೊಬ್ಬರು ರಾಮನಗರ ನಿವಾಸಿಯಾಗಿದ್ದು, ಬೆಂಗಳೂರಿನ ಬ್ಯಾಂಕ್ ಒಂದರಲ್ಲಿ ಕೆಲಸ ಮಾಡುತ್ತಿದ್ದರು. ಇಬ್ಬರನ್ನೂ ರಾಮನಗರ ಕೋವಿಡ್ ರೆಫರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.