ರಾಮನಗರ ಜಿಲ್ಲಾ ಸಶಸ್ತ್ರ ಮೀಸಲು ಪಡೆ (ಡಿ.ಎ.ಆರ್) ಕಾನ್ಸ್ಟೆಬಲ್ ಆಗಿ ಕೆಲಸ ಮಾಡುತ್ತಿದ್ದ ಪ್ರಕಾಶ್ ಮತ್ತು ಅವಿನಾಶ್ ಎಂಬುವರು ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪಿಗಳಾಗಿದ್ದರು. ಮೂರು ವರ್ಷಗಳ ಹಿಂದೆ ದಾಖಲಾಗಿದ್ದ ಕೊಲೆ ಮತ್ತು ಸುಲಿಗೆ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿದೆ. ಈ ನಡುವೆ ಇಲಾಖೆ ತನಿಖೆಯಲ್ಲಿ ಈ ಇಬ್ಬರ ಮೇಲಿನ ಆರೋಪಗಳು ಮೇಲ್ನೋಟಕ್ಕೆ ಸಾಬೀತಾದ ಹಿನ್ನೆಲೆಯಲ್ಲಿ ಇವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ.