ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಬ್ಬರು ಯುವಕರು ನೀರುಪಾಲು?

Last Updated 7 ಏಪ್ರಿಲ್ 2019, 15:36 IST
ಅಕ್ಷರ ಗಾತ್ರ

ರಾಮನಗರ: ಕುಂಬಳಗೂಡು ಪೊಲೀಸ್‌ ಠಾಣೆ ವ್ಯಾಪ್ತಿಯ ಹೊಸಕೆರೆಯಲ್ಲಿ ಮುಳುಗಿ ಇಬ್ಬರು ಯುವಕರು ನೀರುಪಾಲಾದ ಶಂಕೆ ವ್ಯಕ್ತವಾಗಿದೆ.

ಸುಮಾರು 26-27 ವಯಸ್ಸಿನ ಇಬ್ಬರು ಯುವಕರು ಭಾನುವಾರ ನೀರಿಗೆ ಇಳಿದಿದ್ದು, ನಾಪತ್ತೆಯಾಗಿದ್ದಾರೆ. ಈ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿರಬಹುದು ಎಂದು ಹೇಳಲಾಗಿದೆ. ನಾಪತ್ತೆಯಾದ ಯುವಕರ ಬಗ್ಗೆ ಹೆಚ್ಚಿನ ವಿವರ ಲಭ್ಯವಾಗಿಲ್ಲ.

ವಿಷಯ ತಿಳಿಯುತ್ತಲೇ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಕೆರೆಯಲ್ಲಿ ಶವಗಳಿಗಾಗಿ ಶೋಧ ಕಾರ್ಯ ನಡೆಸಿದರು. ಆದರೆ ರಾತ್ರಿಯವರೆಗೂ ಯಾವುದೇ ದೇಹಗಳು ಪತ್ತೆಯಾಗಲಿಲ್ಲ. ಕತ್ತಲೆಯ ಕಾರಣ ಶೋಧ ಕಾರ್ಯಾಚರಣೆಯು ಸ್ಥಗಿತಗೊಂಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT