<p><strong>ರಾಮನಗರ:</strong> ‘ಪ್ರಧಾನಿ ಮೋದಿ ಹೇಳಿದ್ದಾರೆಂದು ನಮ್ಮ ಹೆಣ್ಣು ಮಕ್ಕಳು ಚಿನ್ನದ ತಾಳಿ ಬದಲು ಅರಿಸಿನದ ಕೊಂಬು ಧರಿಸಬೇಕೇ? ತನ್ನ ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ಮೋದಿ ದೇಶದ ಜನರಿಗೆ ಚಿನ್ನ ಖರೀದಿಸಬೇಡಿ ಎಂಬುದು ಸೇರಿದಂತೆ ಮಿತವ್ಯಯದ ಪಾಠ ಹೇಳುತ್ತಿದ್ದಾರೆ’ ಎಂದು ಕಾಂಗ್ರೆಸ್ ಉಪಾಧ್ಯಕ್ಷ ವಿ.ಎಸ್. ಉಗ್ರಪ್ಪ ಕಿಡಿಕಾರಿದರು.</p><p>‘ಮದುವೆ ಸೇರಿದಂತೆ ಇತರ ಸಮಾರಂಭಗಳಿಗೆ ಹೆಣ್ಣು ಮಕ್ಕಳು ಚಿನ್ನ ಖರೀದಿಸುವುದು ಸಾಮಾನ್ಯ. ಆದರೆ, ನಮ್ಮ ಪ್ರಧಾನಿಗೆ ಹೆಣ್ಣು ಮಕ್ಕಳ ಸ್ಥಿತಿಯೇ ಅರ್ಥವಾಗುವುದಿಲ್ಲ ಬಿಡಿ’ ಎಂದು ನಗರದ ಚೈತನ್ಯ ಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ವ್ಯಂಗ್ಯವಾಡಿದರು.</p><p>‘ಕೋವಿಡ್ ನಿರ್ವಹಣೆಯಲ್ಲೂ ವಿಫಲರಾಗಿದ್ದ ಮೋದಿ, ಆಗ ಜನರಿಗೆ ದೀಪ ಹಚ್ಚಲು ಮತ್ತು ತಟ್ಟೆ ಬಡಿಯಲು ಹೇಳಿ ನಗೆಪಾಟಲಿಗೆ ಈಡಾಗಿದ್ದರು. ಈಗ ಡಾಲರ್ ಎದುರು ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ ಕಂಡಿದೆ. ಚಿನ್ನ ಮತ್ತು ಇಂಧನ ದರ ಗಗನಕ್ಕೇರಿದೆ. 11 ವರ್ಷಕ್ಕೆ ಮುಂಚೆ ₹52 ಲಕ್ಷ ಕೋಟಿ ಇದ್ದ ದೇಶದ ಸಾಲ, ಮೋದಿ ಪ್ರಧಾನಿಯಾದ ಬಳಿಕ ₹216 ಲಕ್ಷ ಕೋಟಿಗೆ ಏರಿಕೆಯಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p><p>‘ಇದ್ದಕ್ಕಿದ್ದಂತೆ ಪ್ರಧಾನಿ ಮಿತವ್ಯಯದ ಸಂದೇಶ ನೀಡಲು ಕಾರಣವೇನು? ಅದಕ್ಕೆ ಮುಂಚೆ ಸಂಸತ್ತಿನಲ್ಲಿ ಈ ಬಗ್ಗೆ ವಿಶೇಷ ಅಧಿವೇಶನ ಕರೆಯಬೇಕಿತ್ತು. ಸರ್ವಪಕ್ಷಗಳ ಜೊತೆ ಚರ್ಚಿಸಬೇಕಿತ್ತು. ಆರ್ಥಿಕ ತಜ್ಞರ ಜೊತೆ ಸಮಾಲೋಚನೆ ನಡೆಸಬೇಕಿತ್ತು. ಅದ್ಯಾವುದನ್ನೂ ಮಾಡದ ಪ್ರಧಾನಿ, ನಾಗಪುರದ ಆರ್ಎಸ್ಎಸ್ ಕಚೇರಿಯಿಂದ ಬಂದ ಸೂಚನೆಯನ್ನು ಯಥಾ ಹೇಳಿದರೆ ಹೇಗೆ?’ ಎಂದು ಕುಹುಕವಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ:</strong> ‘ಪ್ರಧಾನಿ ಮೋದಿ ಹೇಳಿದ್ದಾರೆಂದು ನಮ್ಮ ಹೆಣ್ಣು ಮಕ್ಕಳು ಚಿನ್ನದ ತಾಳಿ ಬದಲು ಅರಿಸಿನದ ಕೊಂಬು ಧರಿಸಬೇಕೇ? ತನ್ನ ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ಮೋದಿ ದೇಶದ ಜನರಿಗೆ ಚಿನ್ನ ಖರೀದಿಸಬೇಡಿ ಎಂಬುದು ಸೇರಿದಂತೆ ಮಿತವ್ಯಯದ ಪಾಠ ಹೇಳುತ್ತಿದ್ದಾರೆ’ ಎಂದು ಕಾಂಗ್ರೆಸ್ ಉಪಾಧ್ಯಕ್ಷ ವಿ.ಎಸ್. ಉಗ್ರಪ್ಪ ಕಿಡಿಕಾರಿದರು.</p><p>‘ಮದುವೆ ಸೇರಿದಂತೆ ಇತರ ಸಮಾರಂಭಗಳಿಗೆ ಹೆಣ್ಣು ಮಕ್ಕಳು ಚಿನ್ನ ಖರೀದಿಸುವುದು ಸಾಮಾನ್ಯ. ಆದರೆ, ನಮ್ಮ ಪ್ರಧಾನಿಗೆ ಹೆಣ್ಣು ಮಕ್ಕಳ ಸ್ಥಿತಿಯೇ ಅರ್ಥವಾಗುವುದಿಲ್ಲ ಬಿಡಿ’ ಎಂದು ನಗರದ ಚೈತನ್ಯ ಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ವ್ಯಂಗ್ಯವಾಡಿದರು.</p><p>‘ಕೋವಿಡ್ ನಿರ್ವಹಣೆಯಲ್ಲೂ ವಿಫಲರಾಗಿದ್ದ ಮೋದಿ, ಆಗ ಜನರಿಗೆ ದೀಪ ಹಚ್ಚಲು ಮತ್ತು ತಟ್ಟೆ ಬಡಿಯಲು ಹೇಳಿ ನಗೆಪಾಟಲಿಗೆ ಈಡಾಗಿದ್ದರು. ಈಗ ಡಾಲರ್ ಎದುರು ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ ಕಂಡಿದೆ. ಚಿನ್ನ ಮತ್ತು ಇಂಧನ ದರ ಗಗನಕ್ಕೇರಿದೆ. 11 ವರ್ಷಕ್ಕೆ ಮುಂಚೆ ₹52 ಲಕ್ಷ ಕೋಟಿ ಇದ್ದ ದೇಶದ ಸಾಲ, ಮೋದಿ ಪ್ರಧಾನಿಯಾದ ಬಳಿಕ ₹216 ಲಕ್ಷ ಕೋಟಿಗೆ ಏರಿಕೆಯಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p><p>‘ಇದ್ದಕ್ಕಿದ್ದಂತೆ ಪ್ರಧಾನಿ ಮಿತವ್ಯಯದ ಸಂದೇಶ ನೀಡಲು ಕಾರಣವೇನು? ಅದಕ್ಕೆ ಮುಂಚೆ ಸಂಸತ್ತಿನಲ್ಲಿ ಈ ಬಗ್ಗೆ ವಿಶೇಷ ಅಧಿವೇಶನ ಕರೆಯಬೇಕಿತ್ತು. ಸರ್ವಪಕ್ಷಗಳ ಜೊತೆ ಚರ್ಚಿಸಬೇಕಿತ್ತು. ಆರ್ಥಿಕ ತಜ್ಞರ ಜೊತೆ ಸಮಾಲೋಚನೆ ನಡೆಸಬೇಕಿತ್ತು. ಅದ್ಯಾವುದನ್ನೂ ಮಾಡದ ಪ್ರಧಾನಿ, ನಾಗಪುರದ ಆರ್ಎಸ್ಎಸ್ ಕಚೇರಿಯಿಂದ ಬಂದ ಸೂಚನೆಯನ್ನು ಯಥಾ ಹೇಳಿದರೆ ಹೇಗೆ?’ ಎಂದು ಕುಹುಕವಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>