<p><strong>ಕನಕಪುರ: </strong>ಪರಿಸರ ಮತ್ತು ಪ್ರಕೃತಿ ಮನುಷ್ಯನ ಜೀವನಾಡಿಗಳಾಗಿದ್ದು ಅವುಗಳನ್ನು ಸಂರಕ್ಷಿಸಿ ಉಳಿಸುವ ಕೆಲಸ ಪ್ರತಿಯೊಬ್ಬ ನಾಗರೀಕನೂ ಮಾಡಬೇಕಿದೆ. ಯುವ ಸಮುದಾಯ ಈ ಜವಾಬ್ದಾರಿಯನ್ನು ನಿರ್ವಹಿಸಬೇಕಿದೆ ಎಂದು ಯೂತ್ ಹಾಸ್ಟೆಲ್ ಅಸೋಸಿಯೇಷನ್ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಕೆ.ಪುರುಷೋತ್ತಮ್ ಹೇಳಿದರು.</p>.<p>ಕನಕಪುರ ಯೂತ್ ಹಾಸ್ಟಲ್ ವತಿಯಿಂದ ಗಾಣಕಲ್ ಸರ್ಕಾರಿ ಶಾಲೆಯಲ್ಲಿ ಆಯೋಜನೆ ಮಾಡಿದ್ದ, ಸರ್ಕಾರಿ ಶಾಲೆಯ 45 ವಿದ್ಯಾರ್ಥಿಗಳಿಗೆ ಉಚಿತ ಹೊಲಿದ ಸಮವಸ್ತ್ರ ವಿತರಣೆ ಸಮಾರಂಭದಲ್ಲಿ ಮಾತನಾಡಿದರು.</p>.<p>ಮನುಷ್ಯ ಆರೋಗ್ಯವಾಗಿ ಇರಬೇಕಾದರೆ ಉತ್ತಮ ಪರಿಸರ, ಪರಿಶುದ್ಧವಾದ ಗಾಳಿ, ನೀರು ಸಿಗಬೇಕು. ಅಗತ್ಯಕ್ಕೆ ತಕ್ಕಂತೆ ಅರಣ್ಯ ನಾಡು ಮಾಡುತ್ತಿದ್ದೇವೆ. ಇದ್ದ ಮರಗಿಡಗಳನ್ನು ಕಡಿದು ಪರಿಸರ ನಾಶ ಮಾಡುತ್ತಿದ್ದೇವೆ. ಇವೆಲ್ಲವೂ ಪರಿಸರಕ್ಕೆ ಮಾರಕವಾಗಿ ಮುಂದೆ ದೊಡ್ಡ ಗಂಡಾಂತರ ಎದುರಾಗಲಿದೆ ಎಂದು ಎಚ್ಚರಿಸಿದರು.</p>.<p>ವೈಎಚ್ಐಸಿ ರಾಜ್ಯ ಘಟಕದ ಕೋಶಾಧ್ಯಕ್ಷ ಬಿ.ಎಸ್.ಮಂಜುನಾಥ್ ಮಾತನಾಡಿ, ‘ಪ್ರಕೃತಿಯ ಸೃಷ್ಟಿಯಲ್ಲಿ ನಾವೆಲ್ಲರೂ ಒಂದೇ. ಆದರೆ ಸಮಾಜದಲ್ಲಿ ಶ್ರೀಮಂತ, ಬಡವ ಎಂಬ ವ್ಯತ್ಯಾಸವಿದೆ. ಈ ಅಸಮತೋಲನ ಹೋಗಬೇಕು. ಶೈಕ್ಷಣಿಕವಾಗಿ ಎಲ್ಲ ಮಕ್ಕಳಿಗೂ ಸಮಾನವಾದ ಅವಕಾಶ, ಸವಲತ್ತು ಸಿಗಬೇಕು, ನಮ್ಮ ಅಸೋಸಿಯೇಷನ್ ವತಿಯಿಂದ ಪ್ರತಿ ವರ್ಷ ಸರ್ಕಾರಿ ಶಾಲೆಯ ಮಕ್ಕಳಿಗೆ ಸಮವಸ್ತ್ರ ವಿತರಣೆ ಮಾಡುತ್ತಾ ಬಂದಿದ್ದೇವೆ’ ಎಂದರು.</p>.<p>ಅಸೋಸಿಯೇಷನ್ ಅಧ್ಯಕ್ಷ ಕ್ಯಾಪ್ಟನ್ ಸುಬ್ರಮಣ್ಯ ಅಧ್ಯಕ್ಷತೆ ವಹಿಸಿದ್ದರು. ಸುಜಯ ಸುಬ್ರಮಣ್ಯ, ಕಿರಣ್, ಪೂಜಾ ಭಟ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ: </strong>ಪರಿಸರ ಮತ್ತು ಪ್ರಕೃತಿ ಮನುಷ್ಯನ ಜೀವನಾಡಿಗಳಾಗಿದ್ದು ಅವುಗಳನ್ನು ಸಂರಕ್ಷಿಸಿ ಉಳಿಸುವ ಕೆಲಸ ಪ್ರತಿಯೊಬ್ಬ ನಾಗರೀಕನೂ ಮಾಡಬೇಕಿದೆ. ಯುವ ಸಮುದಾಯ ಈ ಜವಾಬ್ದಾರಿಯನ್ನು ನಿರ್ವಹಿಸಬೇಕಿದೆ ಎಂದು ಯೂತ್ ಹಾಸ್ಟೆಲ್ ಅಸೋಸಿಯೇಷನ್ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಕೆ.ಪುರುಷೋತ್ತಮ್ ಹೇಳಿದರು.</p>.<p>ಕನಕಪುರ ಯೂತ್ ಹಾಸ್ಟಲ್ ವತಿಯಿಂದ ಗಾಣಕಲ್ ಸರ್ಕಾರಿ ಶಾಲೆಯಲ್ಲಿ ಆಯೋಜನೆ ಮಾಡಿದ್ದ, ಸರ್ಕಾರಿ ಶಾಲೆಯ 45 ವಿದ್ಯಾರ್ಥಿಗಳಿಗೆ ಉಚಿತ ಹೊಲಿದ ಸಮವಸ್ತ್ರ ವಿತರಣೆ ಸಮಾರಂಭದಲ್ಲಿ ಮಾತನಾಡಿದರು.</p>.<p>ಮನುಷ್ಯ ಆರೋಗ್ಯವಾಗಿ ಇರಬೇಕಾದರೆ ಉತ್ತಮ ಪರಿಸರ, ಪರಿಶುದ್ಧವಾದ ಗಾಳಿ, ನೀರು ಸಿಗಬೇಕು. ಅಗತ್ಯಕ್ಕೆ ತಕ್ಕಂತೆ ಅರಣ್ಯ ನಾಡು ಮಾಡುತ್ತಿದ್ದೇವೆ. ಇದ್ದ ಮರಗಿಡಗಳನ್ನು ಕಡಿದು ಪರಿಸರ ನಾಶ ಮಾಡುತ್ತಿದ್ದೇವೆ. ಇವೆಲ್ಲವೂ ಪರಿಸರಕ್ಕೆ ಮಾರಕವಾಗಿ ಮುಂದೆ ದೊಡ್ಡ ಗಂಡಾಂತರ ಎದುರಾಗಲಿದೆ ಎಂದು ಎಚ್ಚರಿಸಿದರು.</p>.<p>ವೈಎಚ್ಐಸಿ ರಾಜ್ಯ ಘಟಕದ ಕೋಶಾಧ್ಯಕ್ಷ ಬಿ.ಎಸ್.ಮಂಜುನಾಥ್ ಮಾತನಾಡಿ, ‘ಪ್ರಕೃತಿಯ ಸೃಷ್ಟಿಯಲ್ಲಿ ನಾವೆಲ್ಲರೂ ಒಂದೇ. ಆದರೆ ಸಮಾಜದಲ್ಲಿ ಶ್ರೀಮಂತ, ಬಡವ ಎಂಬ ವ್ಯತ್ಯಾಸವಿದೆ. ಈ ಅಸಮತೋಲನ ಹೋಗಬೇಕು. ಶೈಕ್ಷಣಿಕವಾಗಿ ಎಲ್ಲ ಮಕ್ಕಳಿಗೂ ಸಮಾನವಾದ ಅವಕಾಶ, ಸವಲತ್ತು ಸಿಗಬೇಕು, ನಮ್ಮ ಅಸೋಸಿಯೇಷನ್ ವತಿಯಿಂದ ಪ್ರತಿ ವರ್ಷ ಸರ್ಕಾರಿ ಶಾಲೆಯ ಮಕ್ಕಳಿಗೆ ಸಮವಸ್ತ್ರ ವಿತರಣೆ ಮಾಡುತ್ತಾ ಬಂದಿದ್ದೇವೆ’ ಎಂದರು.</p>.<p>ಅಸೋಸಿಯೇಷನ್ ಅಧ್ಯಕ್ಷ ಕ್ಯಾಪ್ಟನ್ ಸುಬ್ರಮಣ್ಯ ಅಧ್ಯಕ್ಷತೆ ವಹಿಸಿದ್ದರು. ಸುಜಯ ಸುಬ್ರಮಣ್ಯ, ಕಿರಣ್, ಪೂಜಾ ಭಟ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>