ಮೀಸಲಾತಿಗೆ ಸಂಬಂಧಿಸಿದ ಎಲ್ಲ ಕಾಯ್ದೆಗಳನ್ನು ಸಂವಿಧಾನದ 9ನೇ ಪರಿಚ್ಛೇದದ ಅಡಿಯಲ್ಲಿ ತಂದು ನ್ಯಾಯಾಲಯಗಳ ವ್ಯಾಪ್ತಿಯಿಂದ ಹೊರಗಿಡಬೇಕು. ಮೀಸಲಾತಿ ಎಂದರೆ ಸಾಮಾನ್ಯವಾಗಿ ಪರಿಶಿಷ್ಟರಿಗೆ ಮಾತ್ರ ಸೇರಿದ್ದು ಎಂಬ ಭಾವನೆ ಜನರಲ್ಲಿದೆ. ಆದರೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಶೇ 22.5ರಷ್ಟು ಮೀಸಲಾತಿ ಪಡೆಯುತ್ತಿದ್ದರೆ, ಹಿಂದುಳಿದ ವರ್ಗಗಳು ಶೇ 27ರಷ್ಟರ ಲಾಭ ಪಡೆಯುತ್ತಿವೆ ಎಂದು ವಿವರಿಸಿದರು.