ಬಡಾವಣೆಯಲ್ಲಿ ಎರಡು ಸಾವಿರಕ್ಕೂ ಹೆಚ್ಚಿನ ಮನೆಗಳನ್ನು ನಿರ್ಮಿಸಲಾಗುತ್ತಿದೆ. ಆದರೆ, ಶೌಚಾಲಯ ನಿರ್ಮಿಸಿಲ್ಲ. ಬೀದಿ ದೀಪಗಳಿಲ್ಲ, ಮೂಲ ಸೌಕರ್ಯಗಳಿಲ್ಲ. ಶೌಚಾಲಯ ಇಲ್ಲದೆ ಜನರು ಈಗಲೂ ಬಯಲು ಬಹಿರ್ದೆಸೆಗೆ ಹೋಗುತ್ತಿದ್ದಾರೆ. ಕೇಂದ್ರ ಸರ್ಕಾರ ಬಯಲು ಮುಕ್ತ ಶೌಚಾಲಯ ಮಾಡುತ್ತಿದೆ. ಆದರೆ, ಇಲ್ಲಿ ನಗರಸಭೆಯೇ ಬಯಲು ಬಹಿರ್ದೆಸೆಗೆ ದೂಡುತ್ತಿದೆ ಎಂದು ದೂರಿದರು.