<p><strong>ಹಲಗೂರು</strong>:ಸಮೀಪದ ವಿ.ಬಸಾಪುರ ಗ್ರಾಮದಲ್ಲಿರುವ ಬಸವೇಶ್ವರಸ್ವಾಮಿ ದೇವಸ್ಥಾನದಲ್ಲಿ ಬಸವೇಶ್ವರಸ್ವಾಮಿ ದೇವರ ಬಸಪ್ಪನವರ ಮುದ್ರಾಧಾರಣೆ ಕಾರ್ಯಕ್ರಮ ಎರಡು ದಿನಗಳ ಕಾಲ ಭಕ್ತಿ ಪೂರ್ವಕವಾಗಿ ನಡೆಯಿತು.</p>.<p>ಮೇ 13 ರಂದು ಬುಧವಾರ ಸಂಜೆ ಗೋಧೋಳಿ ಲಗ್ನದಲ್ಲಿ ಅಕ್ರೋಧಕ ಗಣಪತಿ ಪೂಜೆ, ಪುಣ್ಯಹಃ ಪಂಚಗವ್ಯ, ಪ್ರೋಕ್ಷಣೆ ಹಾಗೂ ಗಣಪತಿ ಸಹಿತ ಪರಿವಾರ ದೇವತಾ ಹೋಮ, ಲಘು ಪೂರ್ಣಾಹುತಿ ಮತ್ತು ಮಹಾ ಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ ನಡೆಯಿತು.</p>.<p>ಮೇ 14 ರಂದು ಗುರುವಾರ ಬೆಳಿಗ್ಗೆ ಶುಭ ಬ್ರಾಹ್ಮಿ ಮುಹೂರ್ತದಲ್ಲಿ ಪ್ರಧಾನ ಕಳಸ ಸ್ಥಾಪನೆ, ನವಗ್ರಹ, ಮೃತ್ಯುಂಜಯ ಹೋಮ, ಗ್ರಾಮ ದೇವತಾ ಪೂಜೆ ಅಭಿಷೇಕ, ಗಣಪತಿ ಹಾಗೂ ಪರಿವಾರ ದೇವತಾ ಹೋಮ, ಶ್ರೀ ಬಸಪ್ಪನವರಿಗೆ ಮುದ್ರಾಧಾರಣೆ ಮಂತ್ರ ಧೀಕ್ಷಾ ಕಾರ್ಯಕ್ರಮ ನಡೆಯಿತು.</p>.<p>ಪ್ರಧಾನ ಹೋಮ, ಕಲಾ ಹೋಮ, ನೂತನ ಕಲ್ಯಾಣಿಯಿಂದ ಹೊ-ಹೊಂಬಾಳೆ ಸಮೇತ ಶ್ರೀ ಕಾರ್ಕಳಿ ಬಸಪ್ಪ, ಹಲಗೂರು ಶ್ರೀ ಅಘೋರ ಭದ್ರಕಾಳಿ ಬಸಪ್ಪ, ಶ್ರೀ ಬಸವೇಶ್ವರ ಬಸಪ್ಪ ವಿ.ಬಸಾಪುರ ದೇವರುಗಳ ಮೆರವಣಿಗೆ ಮಾಡಲಾಯಿತು. ನಂತರ ಮಹಾಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ ನಡೆಯಿತು. ಅನ್ನಸಂತರ್ಪಣೆ ನಡೆಯಿತು.</p>.<p>ವಿದ್ವಾನ್ ಪ್ರಸಾದ್ ಅಘೋರ ಹಾಗೂ ಶ್ರೀ ಚಂದ್ರಶೇಖರ್ ಆರಾಧ್ಯ ಅವರ ನೇತೃತ್ವದಲ್ಲಿ ದೇವಾಲಯದಲ್ಲಿ ಪೂಜಾ ಕಾರ್ಯಕ್ರಮಗಳು ನಡೆದವು. ವಿ.ಬಸಾಪುರ, ಎನ್.ಕೋಡಿಹಳ್ಳಿ, ಒದು ಬಸಪ್ಪನದೊಡ್ಡಿ, ಮಾರಗೌಡನಹಳ್ಳಿ, ವಳಗೆರೆದೊಡ್ಡಿ, ಬುಯ್ಯನದೊಡ್ಡಿ ಸೇರಿ ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಪಾಲ್ಗೊಂಡಿದ್ದರು.</p>.<p>ಗ್ರಾಮದ ಹಿರಿಯರಾದ ನಾಗಣ್ಣ, ನಾಗೇಂದ್ರ, ಬಿ.ಆನಂದ, ಚಂದ್ರಹಾಸ, ಕೆ.ನಂಜುಂಡೇಗೌಡ, ನಿಖಿಲ್, ದೇವರಾಜು, ರವೀಂದ್ರ, ಪ್ರಭು, ಸತೀಶ್ ಕುಮಾರ್, ಹನುಮಂತೇಗೌಡ, ನಾಗೇಂದ್ರ, ಕೆಂಪೇಗೌಡ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-40-636881005</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಲಗೂರು</strong>:ಸಮೀಪದ ವಿ.ಬಸಾಪುರ ಗ್ರಾಮದಲ್ಲಿರುವ ಬಸವೇಶ್ವರಸ್ವಾಮಿ ದೇವಸ್ಥಾನದಲ್ಲಿ ಬಸವೇಶ್ವರಸ್ವಾಮಿ ದೇವರ ಬಸಪ್ಪನವರ ಮುದ್ರಾಧಾರಣೆ ಕಾರ್ಯಕ್ರಮ ಎರಡು ದಿನಗಳ ಕಾಲ ಭಕ್ತಿ ಪೂರ್ವಕವಾಗಿ ನಡೆಯಿತು.</p>.<p>ಮೇ 13 ರಂದು ಬುಧವಾರ ಸಂಜೆ ಗೋಧೋಳಿ ಲಗ್ನದಲ್ಲಿ ಅಕ್ರೋಧಕ ಗಣಪತಿ ಪೂಜೆ, ಪುಣ್ಯಹಃ ಪಂಚಗವ್ಯ, ಪ್ರೋಕ್ಷಣೆ ಹಾಗೂ ಗಣಪತಿ ಸಹಿತ ಪರಿವಾರ ದೇವತಾ ಹೋಮ, ಲಘು ಪೂರ್ಣಾಹುತಿ ಮತ್ತು ಮಹಾ ಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ ನಡೆಯಿತು.</p>.<p>ಮೇ 14 ರಂದು ಗುರುವಾರ ಬೆಳಿಗ್ಗೆ ಶುಭ ಬ್ರಾಹ್ಮಿ ಮುಹೂರ್ತದಲ್ಲಿ ಪ್ರಧಾನ ಕಳಸ ಸ್ಥಾಪನೆ, ನವಗ್ರಹ, ಮೃತ್ಯುಂಜಯ ಹೋಮ, ಗ್ರಾಮ ದೇವತಾ ಪೂಜೆ ಅಭಿಷೇಕ, ಗಣಪತಿ ಹಾಗೂ ಪರಿವಾರ ದೇವತಾ ಹೋಮ, ಶ್ರೀ ಬಸಪ್ಪನವರಿಗೆ ಮುದ್ರಾಧಾರಣೆ ಮಂತ್ರ ಧೀಕ್ಷಾ ಕಾರ್ಯಕ್ರಮ ನಡೆಯಿತು.</p>.<p>ಪ್ರಧಾನ ಹೋಮ, ಕಲಾ ಹೋಮ, ನೂತನ ಕಲ್ಯಾಣಿಯಿಂದ ಹೊ-ಹೊಂಬಾಳೆ ಸಮೇತ ಶ್ರೀ ಕಾರ್ಕಳಿ ಬಸಪ್ಪ, ಹಲಗೂರು ಶ್ರೀ ಅಘೋರ ಭದ್ರಕಾಳಿ ಬಸಪ್ಪ, ಶ್ರೀ ಬಸವೇಶ್ವರ ಬಸಪ್ಪ ವಿ.ಬಸಾಪುರ ದೇವರುಗಳ ಮೆರವಣಿಗೆ ಮಾಡಲಾಯಿತು. ನಂತರ ಮಹಾಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ ನಡೆಯಿತು. ಅನ್ನಸಂತರ್ಪಣೆ ನಡೆಯಿತು.</p>.<p>ವಿದ್ವಾನ್ ಪ್ರಸಾದ್ ಅಘೋರ ಹಾಗೂ ಶ್ರೀ ಚಂದ್ರಶೇಖರ್ ಆರಾಧ್ಯ ಅವರ ನೇತೃತ್ವದಲ್ಲಿ ದೇವಾಲಯದಲ್ಲಿ ಪೂಜಾ ಕಾರ್ಯಕ್ರಮಗಳು ನಡೆದವು. ವಿ.ಬಸಾಪುರ, ಎನ್.ಕೋಡಿಹಳ್ಳಿ, ಒದು ಬಸಪ್ಪನದೊಡ್ಡಿ, ಮಾರಗೌಡನಹಳ್ಳಿ, ವಳಗೆರೆದೊಡ್ಡಿ, ಬುಯ್ಯನದೊಡ್ಡಿ ಸೇರಿ ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಪಾಲ್ಗೊಂಡಿದ್ದರು.</p>.<p>ಗ್ರಾಮದ ಹಿರಿಯರಾದ ನಾಗಣ್ಣ, ನಾಗೇಂದ್ರ, ಬಿ.ಆನಂದ, ಚಂದ್ರಹಾಸ, ಕೆ.ನಂಜುಂಡೇಗೌಡ, ನಿಖಿಲ್, ದೇವರಾಜು, ರವೀಂದ್ರ, ಪ್ರಭು, ಸತೀಶ್ ಕುಮಾರ್, ಹನುಮಂತೇಗೌಡ, ನಾಗೇಂದ್ರ, ಕೆಂಪೇಗೌಡ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-40-636881005</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>