<p><strong>ಸಾತನೂರು (ಕನಕಪುರ):</strong> ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯ. ಶಿಕ್ಷಕ ವೃತ್ತಿಯೂ ಸಮಾಜದಲ್ಲಿ ಪವಿತ್ರ ಎಂದು ಜಿಲ್ಲಾ ಪಂಚಾಯಿತಿ ಶಿಕ್ಷಣ ಮತ್ತು ಆರೋಗ್ಯ ಸಮಿತಿ ಅಧ್ಯಕ್ಷ ಕುರುಬಳ್ಳಿ ಶಂಕರ್ ತಿಳಿಸಿದರು.</p>.<p>ಇಲ್ಲಿನ ಸಾತನೂರು ಹೋಬಳಿ ಹೊಸ ಕಬ್ಬಾಳು ಡಾ.ಬಿ.ಆರ್.ಅಂಬೇಡ್ಕರ್ ಪ್ರೌಢಶಾಲೆಯಲ್ಲಿ ನಡೆದ ಗುರುವಂದನಾ ಸಮಾರಂಭದಲ್ಲಿ ಶಿಕ್ಷಕರನ್ನು ಅಭಿನಂದಿಸಿ ಮಾತನಾಡಿದರು.</p>.<p>ಸಮಾಜದಲ್ಲಿ ಇಂದಿಗೂ ಮೌಲ್ಯ ಉಳಿಸಿಕೊಂಡಿರುವ ಕ್ಷೇತ್ರ ಶಿಕ್ಷಣ. ಯಾವುದೇ ಫಲಾಪೇಕ್ಷೆಯಿಲ್ಲದೆ ಶಿಕ್ಷಕರು ಜ್ಞಾನವನ್ನು ಮಕ್ಕಳಿಗೆ ಧಾರೆ ಎರೆದುಕೊಡುತ್ತಿದ್ದಾರೆ. ಆ ಕಾರಣದಿಂದಲೇ ಶಿಕ್ಷಕರಿಗೆ ಸಮಾಜದಲ್ಲಿ ಗೌರವ ಸಿಗುತ್ತಿದೆ ಎಂದರು.</p>.<p>ವಿದ್ಯೆ ಹೇಳಿಕೊಟ್ಟ ಗುರು ಯಾರು ಮರೆಯುವುದಿಲ್ಲ. ಆ ಕಾರಣದಿಂದಲೇ ಈ ಶಾಲೆ ವಾರ್ಷಿಕೋತ್ಸವ ಸಮಾರಂಭದಲ್ಲಿ ಗುರುಗಳನ್ನು ಅಭಿನಂದಿಸುವ ಕೆಲಸ ನಡೆದಿದೆ ಎಂದರು.</p>.<p>ಶಿಕ್ಷಕರು ತಮ್ಮ ಜವಾಬ್ದಾರಿ ಅರಿತು ಮಕ್ಕಳ ಭವಿಷ್ಯ ರೂಪಿಸುವ ಕಡೆಗೆ ಹೆಚ್ಚು ಒತ್ತು ಕೊಡಬೇಕು. ಇಂದಿನ ಪ್ರಸ್ತುತ ಸಮಾಜದ ಸ್ಪರ್ಧೆಗಳಿಗೆ ಅನುಗುಣವಾಗಿ ಮಕ್ಕಳನ್ನು ತಯಾರುಗೊಳಿಸಬೇಕಿದೆ ಎಂದರು.</p>.<p>ಕಾಂಗ್ರೆಸ್ ಮುಖಂಡ ಎಚ್.ಕೆ.ಶ್ರೀಕಂಠು ಮಾತನಾಡಿ, ಸಮಾಜದಲ್ಲಿ ಮೊದಲು ಮನುಷ್ಯರಾಗಬೇಕು. ಮಾನವೀಯ ಗುಣಗಳನ್ನು ಬೆಳೆಸಿಕೊಳ್ಳಬೇಕು. ವಿದ್ಯೆ ಕಲಿಸಿದ ಗುರುವನ್ನು ಎಂದೂ ಮರೆಯದೆ ಪೂಜ್ಯ ಸ್ಥಾನದಲ್ಲಿ ಗೌರವಿಸಬೇಕು ಎಂದು ಕಿವಿಮಾತು ಹೇಳಿದರು.</p>.<p>ಸೇವೆಯಿಂದ ನಿವೃತ್ತರಾದ ಎಸ್.ಸಿದ್ದಪ್ಪ, ಬೇರೆ ಶಾಲೆಗೆ ವರ್ಗಾವಣೆಯಾದ ಎಂ.ಶಂಕರ್, ಶಿವಲಿಂಗಯ್ಯ, ವೇಣುಗೋಪಾಲ್, ರಂಗರಾಜು ಅವರನ್ನು ಸನ್ಮಾನಿಸಿ ಗೌರವದಿಂದ ಬೀಳ್ಕೊಡುಗೆ ನೀಡಲಾಯಿತು.</p>.<p>ಕಾಂಗ್ರೆಸ್ ಹಿರಿಯ ಮುಖಂಡ ಸೂರ್ನಳ್ಳಿ ಜಯರಾಮ್, ಕುರುಬಳ್ಳಿದೊಡ್ಡಿ ಧನಂಜಯ, ಗ್ರಾಮ ಪಂಚಾಯಿತಿ ಸದಸ್ಯ ಕಾಂತರಾಜು, ಮುಖ್ಯ ಶಿಕ್ಷಕ ಸಿ.ಪುಟ್ಟಸ್ವಾಮಿ, ಸಹ ಶಿಕ್ಷಕರಾದ ರಾಮದಾಸ್, ದಯಾನಂದ, ನಾಗಮ್ಮ, ರಾಮಣ್ಣ, ಶಿವಲಿಂಗಯ್ಯ, ಹಿರಿಯ ವಿದ್ಯಾರ್ಥಿಗಳಾದ ಪುರುಷೋತ್ತಮ್, ಹನುಮಂತೇಗೌಡ, ನಾಗರಾಜು, ಸುರೇಶ್ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾತನೂರು (ಕನಕಪುರ):</strong> ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯ. ಶಿಕ್ಷಕ ವೃತ್ತಿಯೂ ಸಮಾಜದಲ್ಲಿ ಪವಿತ್ರ ಎಂದು ಜಿಲ್ಲಾ ಪಂಚಾಯಿತಿ ಶಿಕ್ಷಣ ಮತ್ತು ಆರೋಗ್ಯ ಸಮಿತಿ ಅಧ್ಯಕ್ಷ ಕುರುಬಳ್ಳಿ ಶಂಕರ್ ತಿಳಿಸಿದರು.</p>.<p>ಇಲ್ಲಿನ ಸಾತನೂರು ಹೋಬಳಿ ಹೊಸ ಕಬ್ಬಾಳು ಡಾ.ಬಿ.ಆರ್.ಅಂಬೇಡ್ಕರ್ ಪ್ರೌಢಶಾಲೆಯಲ್ಲಿ ನಡೆದ ಗುರುವಂದನಾ ಸಮಾರಂಭದಲ್ಲಿ ಶಿಕ್ಷಕರನ್ನು ಅಭಿನಂದಿಸಿ ಮಾತನಾಡಿದರು.</p>.<p>ಸಮಾಜದಲ್ಲಿ ಇಂದಿಗೂ ಮೌಲ್ಯ ಉಳಿಸಿಕೊಂಡಿರುವ ಕ್ಷೇತ್ರ ಶಿಕ್ಷಣ. ಯಾವುದೇ ಫಲಾಪೇಕ್ಷೆಯಿಲ್ಲದೆ ಶಿಕ್ಷಕರು ಜ್ಞಾನವನ್ನು ಮಕ್ಕಳಿಗೆ ಧಾರೆ ಎರೆದುಕೊಡುತ್ತಿದ್ದಾರೆ. ಆ ಕಾರಣದಿಂದಲೇ ಶಿಕ್ಷಕರಿಗೆ ಸಮಾಜದಲ್ಲಿ ಗೌರವ ಸಿಗುತ್ತಿದೆ ಎಂದರು.</p>.<p>ವಿದ್ಯೆ ಹೇಳಿಕೊಟ್ಟ ಗುರು ಯಾರು ಮರೆಯುವುದಿಲ್ಲ. ಆ ಕಾರಣದಿಂದಲೇ ಈ ಶಾಲೆ ವಾರ್ಷಿಕೋತ್ಸವ ಸಮಾರಂಭದಲ್ಲಿ ಗುರುಗಳನ್ನು ಅಭಿನಂದಿಸುವ ಕೆಲಸ ನಡೆದಿದೆ ಎಂದರು.</p>.<p>ಶಿಕ್ಷಕರು ತಮ್ಮ ಜವಾಬ್ದಾರಿ ಅರಿತು ಮಕ್ಕಳ ಭವಿಷ್ಯ ರೂಪಿಸುವ ಕಡೆಗೆ ಹೆಚ್ಚು ಒತ್ತು ಕೊಡಬೇಕು. ಇಂದಿನ ಪ್ರಸ್ತುತ ಸಮಾಜದ ಸ್ಪರ್ಧೆಗಳಿಗೆ ಅನುಗುಣವಾಗಿ ಮಕ್ಕಳನ್ನು ತಯಾರುಗೊಳಿಸಬೇಕಿದೆ ಎಂದರು.</p>.<p>ಕಾಂಗ್ರೆಸ್ ಮುಖಂಡ ಎಚ್.ಕೆ.ಶ್ರೀಕಂಠು ಮಾತನಾಡಿ, ಸಮಾಜದಲ್ಲಿ ಮೊದಲು ಮನುಷ್ಯರಾಗಬೇಕು. ಮಾನವೀಯ ಗುಣಗಳನ್ನು ಬೆಳೆಸಿಕೊಳ್ಳಬೇಕು. ವಿದ್ಯೆ ಕಲಿಸಿದ ಗುರುವನ್ನು ಎಂದೂ ಮರೆಯದೆ ಪೂಜ್ಯ ಸ್ಥಾನದಲ್ಲಿ ಗೌರವಿಸಬೇಕು ಎಂದು ಕಿವಿಮಾತು ಹೇಳಿದರು.</p>.<p>ಸೇವೆಯಿಂದ ನಿವೃತ್ತರಾದ ಎಸ್.ಸಿದ್ದಪ್ಪ, ಬೇರೆ ಶಾಲೆಗೆ ವರ್ಗಾವಣೆಯಾದ ಎಂ.ಶಂಕರ್, ಶಿವಲಿಂಗಯ್ಯ, ವೇಣುಗೋಪಾಲ್, ರಂಗರಾಜು ಅವರನ್ನು ಸನ್ಮಾನಿಸಿ ಗೌರವದಿಂದ ಬೀಳ್ಕೊಡುಗೆ ನೀಡಲಾಯಿತು.</p>.<p>ಕಾಂಗ್ರೆಸ್ ಹಿರಿಯ ಮುಖಂಡ ಸೂರ್ನಳ್ಳಿ ಜಯರಾಮ್, ಕುರುಬಳ್ಳಿದೊಡ್ಡಿ ಧನಂಜಯ, ಗ್ರಾಮ ಪಂಚಾಯಿತಿ ಸದಸ್ಯ ಕಾಂತರಾಜು, ಮುಖ್ಯ ಶಿಕ್ಷಕ ಸಿ.ಪುಟ್ಟಸ್ವಾಮಿ, ಸಹ ಶಿಕ್ಷಕರಾದ ರಾಮದಾಸ್, ದಯಾನಂದ, ನಾಗಮ್ಮ, ರಾಮಣ್ಣ, ಶಿವಲಿಂಗಯ್ಯ, ಹಿರಿಯ ವಿದ್ಯಾರ್ಥಿಗಳಾದ ಪುರುಷೋತ್ತಮ್, ಹನುಮಂತೇಗೌಡ, ನಾಗರಾಜು, ಸುರೇಶ್ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>