ಕೋವಿಡ್ ವಿಷಯದಲ್ಲಿ ರಾಜಕೀಯ ಬೇಡ. ಈ ಬಗ್ಗೆ ಮುಖ್ಯಮಂತ್ರಿಗಳು ತಮ್ಮ ದಕ್ಷತೆ ಪ್ರದರ್ಶಿಸಬೇಕು. ಅಸಮರ್ಥ ಸಚಿವರನ್ನು ಸಂಪುಟದಿಂದ ಕೈಬಿಡಬೇಕು. ಅಧಿಕಾರಿಗಳಿಗೂ ಅಗತ್ಯ ಮಾರ್ಗದರ್ಶನ ನೀಡಬೇಕು. ಬೀದಿ ಬೀದಿಗಳಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಬೇಕು. ಹೆಲಿಕಾಪ್ಟರ್ ಮೂಲಕವೂ ದ್ರಾವಣ ಸಿಂಪಡಿಸಬೇಕು ಎಂದು ಆಗ್ರಹಿಸಿದರು. ವಿವಿಧ ಸಂಘಟನೆಗಳ ಮುಖಂಡರಾದ ಜಗದೀಶ, ಸಿ.ಎಸ್. ಜಯಕುಮಾರ್, ಪಾರ್ಥಸಾರಥಿ ಇದ್ದರು.