<p><strong>ರಾಮನಗರ: </strong>ಕೋವಿಡ್-19 ರೆಫೆರೆಲ್ ಆಸ್ಪತ್ರೆಯಾಗಿ ಪರಿವರ್ತಿಸಲಾಗಿರುವ ಕಂದಾಯ ಭವನವನ್ನು ಮುಂದಿನ ದಿನಗಳಲ್ಲಿ ವಿಸ್ತರಿತ ಆಸ್ಪತ್ರೆಯಾಗಿ ಮುಂದುವರೆಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಜಿಲ್ಲಾಡಳಿತಕ್ಕೆ ಸೂಚಿಸಿದರು.</p>.<p>ರಾಮನಗರ ಜಿಲ್ಲೆಯ ಕೋವಿಡ್ ಪರಿಸ್ಥಿತಿ ಕುರಿತಂತೆ ಗುರುವಾರ ಬೆಂಗಳೂರಿನಿಂದ ಜಿಲ್ಲಾಡಳಿತದೊಂದಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಅವರು ಮಾತನಾಡಿದರು. ಈಗಿರುವ ಕೋವಿಡ್-19 ಆಸ್ಪತ್ರೆಯನ್ನು 300 ಹಾಸಿಗೆಗಳ ಸುಸಜ್ಜಿತ ವಿಸ್ತರಿತ ಆಸ್ಪತ್ರೆಯಾಗಿ ಮಾರ್ಪಡಿಸಲು ಅಗತ್ಯ ಪ್ರಸ್ತಾವ ಸಲ್ಲಿಸುವಂತೆ ತಿಳಿಸಿದರು. ವಿಸ್ತರಿತ ಆಸ್ಪತ್ರೆಯಲ್ಲಿ ತುರ್ತು ನಿರ್ವಹಣಾ ಕೇಂದ್ರ, ಅಪಘಾತ ಚಿಕಿತ್ಸೆ ವಿಭಾಗ, ಟ್ರಾಮ, ಕ್ಯಾನ್ಸರ್ ಸೇರಿದಂತೆ ಪ್ರಮುಖ ರೋಗಗಳಿಗೆ ಚಿಕಿತ್ಸೆ ನೀಡಲು ಸಜ್ಜುಗೊಳಿಸುವಂತೆ ಸಲಹೆ ನೀಡಿದರು.</p>.<p><strong>ಹುದ್ದೆ ಭರ್ತಿ:</strong> ಪ್ರಸಕ್ತ ರಾಮನಗರ ಜಿಲ್ಲೆಯಲ್ಲಿ ಅವಶ್ಯಕತೆ ಇರುವ 18 ವೈದ್ಯರು, 30 ಶುಶ್ರೂಷಕಿಯರು, 26 ಡಿ ಗ್ರೂಪ್ ಮತ್ತು 14 ಪ್ರಯೋಗಾಲಯ ಪರೀಕ್ಷಕರನ್ನು ಭರ್ತಿ ಮಾಡಿಕೊಳ್ಳಲು ಸಚಿವರು ಸೂಚಿಸಿದರು.</p>.<p>ಕ್ಷಿಪ್ರ ಪರೀಕ್ಷೆ: ಜಿಲ್ಲೆಯಲ್ಲಿ ಕೋವಿಡ್-19 ಅನ್ನು ನಿಯಂತ್ರಿಸಲು ಅನುವಾಗುವಂತೆ ಸ್ಯಾಂಪಲ್ ಪರೀಕ್ಷೆಯ ಸಂಖ್ಯೆಯನ್ನು ಹೆಚ್ಚಿಸುವಂತೆ ಸೂಚಿಸಿದ ಅವರು, ಪ್ರತಿ ದಿನವೂ 200ಕ್ಕೂ ಹೆಚ್ಚು ಟ್ರೂನೆಟ್ ಮತ್ತು ಆ್ಯಂಟಿಜೆನ್ ಪರೀಕ್ಷೆಗಳನ್ನು ಕಡ್ಡಾಯವಾಗಿ ನಡೆಸುವಂತೆ ತಿಳಿಸಿದರು.</p>.<p>ಆರ್ಟಿ-ಪಿಸಿಆರ್ ಪರೀಕ್ಷೆ: ಉದ್ಘಾಟಿಸಬೇಕಾಗಿರುವ ಹೊಸ ಜಿಲ್ಲಾ ಆಸ್ಪತ್ರೆಯ ಕಟ್ಟಡದಲ್ಲಿ ಆರ್ಟಿ-ಪಿಸಿಆರ್ ಪರೀಕ್ಷೆ ಕೇಂದ್ರವನ್ನು ಅಗತ್ಯ ಸಿಬ್ಬಂದಿಯೊಂದಿಗೆ ಜುಲೈ ತಿಂಗಳ ಅಂತ್ಯಕ್ಕೆ ಆರಂಭಿಸಬೇಕು. ಇದಕ್ಕೆ ಬೇಕಾಗಿರುವ ನೆರವನ್ನು ಕೊಪ್ಪಳದಲ್ಲಿರುವ ಕೇಂದ್ರದೊಂದಿಗೆ ಪಡೆದುಕೊಳ್ಳುವಂತೆ ತಿಳಿಸಿದರು. ಹಾಗೆಯೇ, ಆಸ್ಪತ್ರೆಯಲ್ಲಿರುವ ಈ ಕೇಂದ್ರದ ನಿರ್ವಹಣೆಯನ್ನು ಹೇಗೆ ನಿರ್ವಹಿಸಬೇಕು ಎಂಬುದರ ಬಗ್ಗೆ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯವರು ಮಾಹಿತಿ ನೀಡಲಿದ್ದಾರೆ ಎಂದರು.</p>.<p>ಸಚಿವರೊಂದಿಗೆ ವಿಡಿಯೊ ಕಾನ್ಫರೆನ್ಸ್ನಲ್ಲಿ ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಇಕ್ರಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನೂಪ್ ಶೆಟ್ಟಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಿರಂಜನ್ ಪಾಲ್ಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ: </strong>ಕೋವಿಡ್-19 ರೆಫೆರೆಲ್ ಆಸ್ಪತ್ರೆಯಾಗಿ ಪರಿವರ್ತಿಸಲಾಗಿರುವ ಕಂದಾಯ ಭವನವನ್ನು ಮುಂದಿನ ದಿನಗಳಲ್ಲಿ ವಿಸ್ತರಿತ ಆಸ್ಪತ್ರೆಯಾಗಿ ಮುಂದುವರೆಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಜಿಲ್ಲಾಡಳಿತಕ್ಕೆ ಸೂಚಿಸಿದರು.</p>.<p>ರಾಮನಗರ ಜಿಲ್ಲೆಯ ಕೋವಿಡ್ ಪರಿಸ್ಥಿತಿ ಕುರಿತಂತೆ ಗುರುವಾರ ಬೆಂಗಳೂರಿನಿಂದ ಜಿಲ್ಲಾಡಳಿತದೊಂದಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಅವರು ಮಾತನಾಡಿದರು. ಈಗಿರುವ ಕೋವಿಡ್-19 ಆಸ್ಪತ್ರೆಯನ್ನು 300 ಹಾಸಿಗೆಗಳ ಸುಸಜ್ಜಿತ ವಿಸ್ತರಿತ ಆಸ್ಪತ್ರೆಯಾಗಿ ಮಾರ್ಪಡಿಸಲು ಅಗತ್ಯ ಪ್ರಸ್ತಾವ ಸಲ್ಲಿಸುವಂತೆ ತಿಳಿಸಿದರು. ವಿಸ್ತರಿತ ಆಸ್ಪತ್ರೆಯಲ್ಲಿ ತುರ್ತು ನಿರ್ವಹಣಾ ಕೇಂದ್ರ, ಅಪಘಾತ ಚಿಕಿತ್ಸೆ ವಿಭಾಗ, ಟ್ರಾಮ, ಕ್ಯಾನ್ಸರ್ ಸೇರಿದಂತೆ ಪ್ರಮುಖ ರೋಗಗಳಿಗೆ ಚಿಕಿತ್ಸೆ ನೀಡಲು ಸಜ್ಜುಗೊಳಿಸುವಂತೆ ಸಲಹೆ ನೀಡಿದರು.</p>.<p><strong>ಹುದ್ದೆ ಭರ್ತಿ:</strong> ಪ್ರಸಕ್ತ ರಾಮನಗರ ಜಿಲ್ಲೆಯಲ್ಲಿ ಅವಶ್ಯಕತೆ ಇರುವ 18 ವೈದ್ಯರು, 30 ಶುಶ್ರೂಷಕಿಯರು, 26 ಡಿ ಗ್ರೂಪ್ ಮತ್ತು 14 ಪ್ರಯೋಗಾಲಯ ಪರೀಕ್ಷಕರನ್ನು ಭರ್ತಿ ಮಾಡಿಕೊಳ್ಳಲು ಸಚಿವರು ಸೂಚಿಸಿದರು.</p>.<p>ಕ್ಷಿಪ್ರ ಪರೀಕ್ಷೆ: ಜಿಲ್ಲೆಯಲ್ಲಿ ಕೋವಿಡ್-19 ಅನ್ನು ನಿಯಂತ್ರಿಸಲು ಅನುವಾಗುವಂತೆ ಸ್ಯಾಂಪಲ್ ಪರೀಕ್ಷೆಯ ಸಂಖ್ಯೆಯನ್ನು ಹೆಚ್ಚಿಸುವಂತೆ ಸೂಚಿಸಿದ ಅವರು, ಪ್ರತಿ ದಿನವೂ 200ಕ್ಕೂ ಹೆಚ್ಚು ಟ್ರೂನೆಟ್ ಮತ್ತು ಆ್ಯಂಟಿಜೆನ್ ಪರೀಕ್ಷೆಗಳನ್ನು ಕಡ್ಡಾಯವಾಗಿ ನಡೆಸುವಂತೆ ತಿಳಿಸಿದರು.</p>.<p>ಆರ್ಟಿ-ಪಿಸಿಆರ್ ಪರೀಕ್ಷೆ: ಉದ್ಘಾಟಿಸಬೇಕಾಗಿರುವ ಹೊಸ ಜಿಲ್ಲಾ ಆಸ್ಪತ್ರೆಯ ಕಟ್ಟಡದಲ್ಲಿ ಆರ್ಟಿ-ಪಿಸಿಆರ್ ಪರೀಕ್ಷೆ ಕೇಂದ್ರವನ್ನು ಅಗತ್ಯ ಸಿಬ್ಬಂದಿಯೊಂದಿಗೆ ಜುಲೈ ತಿಂಗಳ ಅಂತ್ಯಕ್ಕೆ ಆರಂಭಿಸಬೇಕು. ಇದಕ್ಕೆ ಬೇಕಾಗಿರುವ ನೆರವನ್ನು ಕೊಪ್ಪಳದಲ್ಲಿರುವ ಕೇಂದ್ರದೊಂದಿಗೆ ಪಡೆದುಕೊಳ್ಳುವಂತೆ ತಿಳಿಸಿದರು. ಹಾಗೆಯೇ, ಆಸ್ಪತ್ರೆಯಲ್ಲಿರುವ ಈ ಕೇಂದ್ರದ ನಿರ್ವಹಣೆಯನ್ನು ಹೇಗೆ ನಿರ್ವಹಿಸಬೇಕು ಎಂಬುದರ ಬಗ್ಗೆ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯವರು ಮಾಹಿತಿ ನೀಡಲಿದ್ದಾರೆ ಎಂದರು.</p>.<p>ಸಚಿವರೊಂದಿಗೆ ವಿಡಿಯೊ ಕಾನ್ಫರೆನ್ಸ್ನಲ್ಲಿ ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಇಕ್ರಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನೂಪ್ ಶೆಟ್ಟಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಿರಂಜನ್ ಪಾಲ್ಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>