ರಾಮನಗರ ಜಿಲ್ಲೆಯ ಕೋವಿಡ್ ಪರಿಸ್ಥಿತಿ ಕುರಿತಂತೆ ಗುರುವಾರ ಬೆಂಗಳೂರಿನಿಂದ ಜಿಲ್ಲಾಡಳಿತದೊಂದಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಅವರು ಮಾತನಾಡಿದರು. ಈಗಿರುವ ಕೋವಿಡ್-19 ಆಸ್ಪತ್ರೆಯನ್ನು 300 ಹಾಸಿಗೆಗಳ ಸುಸಜ್ಜಿತ ವಿಸ್ತರಿತ ಆಸ್ಪತ್ರೆಯಾಗಿ ಮಾರ್ಪಡಿಸಲು ಅಗತ್ಯ ಪ್ರಸ್ತಾವ ಸಲ್ಲಿಸುವಂತೆ ತಿಳಿಸಿದರು. ವಿಸ್ತರಿತ ಆಸ್ಪತ್ರೆಯಲ್ಲಿ ತುರ್ತು ನಿರ್ವಹಣಾ ಕೇಂದ್ರ, ಅಪಘಾತ ಚಿಕಿತ್ಸೆ ವಿಭಾಗ, ಟ್ರಾಮ, ಕ್ಯಾನ್ಸರ್ ಸೇರಿದಂತೆ ಪ್ರಮುಖ ರೋಗಗಳಿಗೆ ಚಿಕಿತ್ಸೆ ನೀಡಲು ಸಜ್ಜುಗೊಳಿಸುವಂತೆ ಸಲಹೆ ನೀಡಿದರು.