<p><strong>ಕನಕಪುರ: </strong>ಚಿಕ್ಕತಿರುಪತಿಯಂದೇ ಪ್ರಸಿದ್ಧಿಯಾಗಿರುವ ಇಲ್ಲಿನ ಕಲ್ಲಹಳ್ಳಿ ಶ್ರೀನಿವಾಸ ದೇವಾಲಯದಲ್ಲಿ ವೆಂಕಟೇಶ್ವರಸ್ವಾಮಿ ಮೂರ್ತಿಗೆ ಲಕ್ಷ್ಮಿ ಅಮ್ಮನವರ ಅಲಂಕಾರವನ್ನು ವಿಶೇಷವಾಗಿ ಮಾಡಲಾಗಿದೆ.</p>.<p>ಸುಮಾರು 25 ವರ್ಷಗಳ ಹಿಂದೆ ಅರ್ಚಕರಿಗೆ ಪೂಜೆ ಮಾಡುವ ಸಂದರ್ಭದಲ್ಲಿ ವೆಂಕಟೇಶ್ವರಸ್ವಾಮಿ ಮೂರ್ತಿಯಿಂದ ಲಕ್ಷ್ಮಿ ಅಮ್ಮನವರ ದರ್ಶನವಾದಂತೆ ಅನುಭವವಾಗಿದ್ದರಿಂದ ಅಲ್ಲಿಂದ ಪ್ರತಿವರ್ಷ ಆಷಾಡ ಮಾಸಕ್ಕೂ ಮುನ್ನ ವೆಂಕಟೇಶ್ವರ ಮೂರ್ತಿಗೆ ಲಕ್ಷ್ಮಿ ಅಮ್ಮನವರ ಅಲಂಕಾರ ಮಾಡಿ ಅಮವಾಸ್ಯೆ ದಿವಸಕ್ಕೆ ಮುಕ್ತಾಯ ಮಾಡಲಾಗುತ್ತದೆ.</p>.<p>ಈ ವರ್ಷವು ಜೂನ್ 23 ರಂದು ಶ್ರೀನಿವಾಸಸ್ವಾಮಿಯ ಮೂರ್ತಿಗೆ ಅಮ್ಮನವರ ಅಲಂಕಾರ ಮಾಡಿ ಚಿನ್ನಾಭರಣವನ್ನು ತೊಡಿಸಿ ಪ್ರತಿದಿನ ವಿಶೇಷವಾಗಿ ವಿವಿಧ ಹೂಗಳಿಂದ ಅಲಂಕಾರ ಮಾಡಿ ಭಕ್ತರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಜೂನ್ 28 ಮಂಗಳವಾರಕ್ಕೆ ಅಮ್ಮನವರ ಅಲಂಕಾರ ಮುಕ್ತಾಯವಾಗುತ್ತದೆ.</p>.<p>ಕಲ್ಲಹಳ್ಳಿ ದೇವಾಲಯದಲ್ಲಿ ಅಮ್ಮನವರ ಅಲಂಕಾರ ಮಾಡುತ್ತಿರುವುದರಿಂದ ಸುತ್ತಮುತ್ತಲ ಗ್ರಾಮಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಾಲಯಕ್ಕೆ ಬಂದು ಪೂಜಾ ಕಾರ್ಯದಲ್ಲಿ ಪಾಲ್ಗೊಂಡು ಅಮ್ಮನವರ ದರ್ಶನ ಪಡೆಯುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ: </strong>ಚಿಕ್ಕತಿರುಪತಿಯಂದೇ ಪ್ರಸಿದ್ಧಿಯಾಗಿರುವ ಇಲ್ಲಿನ ಕಲ್ಲಹಳ್ಳಿ ಶ್ರೀನಿವಾಸ ದೇವಾಲಯದಲ್ಲಿ ವೆಂಕಟೇಶ್ವರಸ್ವಾಮಿ ಮೂರ್ತಿಗೆ ಲಕ್ಷ್ಮಿ ಅಮ್ಮನವರ ಅಲಂಕಾರವನ್ನು ವಿಶೇಷವಾಗಿ ಮಾಡಲಾಗಿದೆ.</p>.<p>ಸುಮಾರು 25 ವರ್ಷಗಳ ಹಿಂದೆ ಅರ್ಚಕರಿಗೆ ಪೂಜೆ ಮಾಡುವ ಸಂದರ್ಭದಲ್ಲಿ ವೆಂಕಟೇಶ್ವರಸ್ವಾಮಿ ಮೂರ್ತಿಯಿಂದ ಲಕ್ಷ್ಮಿ ಅಮ್ಮನವರ ದರ್ಶನವಾದಂತೆ ಅನುಭವವಾಗಿದ್ದರಿಂದ ಅಲ್ಲಿಂದ ಪ್ರತಿವರ್ಷ ಆಷಾಡ ಮಾಸಕ್ಕೂ ಮುನ್ನ ವೆಂಕಟೇಶ್ವರ ಮೂರ್ತಿಗೆ ಲಕ್ಷ್ಮಿ ಅಮ್ಮನವರ ಅಲಂಕಾರ ಮಾಡಿ ಅಮವಾಸ್ಯೆ ದಿವಸಕ್ಕೆ ಮುಕ್ತಾಯ ಮಾಡಲಾಗುತ್ತದೆ.</p>.<p>ಈ ವರ್ಷವು ಜೂನ್ 23 ರಂದು ಶ್ರೀನಿವಾಸಸ್ವಾಮಿಯ ಮೂರ್ತಿಗೆ ಅಮ್ಮನವರ ಅಲಂಕಾರ ಮಾಡಿ ಚಿನ್ನಾಭರಣವನ್ನು ತೊಡಿಸಿ ಪ್ರತಿದಿನ ವಿಶೇಷವಾಗಿ ವಿವಿಧ ಹೂಗಳಿಂದ ಅಲಂಕಾರ ಮಾಡಿ ಭಕ್ತರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಜೂನ್ 28 ಮಂಗಳವಾರಕ್ಕೆ ಅಮ್ಮನವರ ಅಲಂಕಾರ ಮುಕ್ತಾಯವಾಗುತ್ತದೆ.</p>.<p>ಕಲ್ಲಹಳ್ಳಿ ದೇವಾಲಯದಲ್ಲಿ ಅಮ್ಮನವರ ಅಲಂಕಾರ ಮಾಡುತ್ತಿರುವುದರಿಂದ ಸುತ್ತಮುತ್ತಲ ಗ್ರಾಮಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಾಲಯಕ್ಕೆ ಬಂದು ಪೂಜಾ ಕಾರ್ಯದಲ್ಲಿ ಪಾಲ್ಗೊಂಡು ಅಮ್ಮನವರ ದರ್ಶನ ಪಡೆಯುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>