‘ಜ. 26ರಂದು ರಾಯಚೂರು ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಏರ್ಪಡಿಸಲಾಗಿದ್ದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಸ್ಥಳೀಯ ನ್ಯಾಯಾಧೀಶ ಅಂಬೇಡ್ಕರ್ ಭಾವಚಿತ್ರ ಇರುವ ಕಾರಣಕ್ಕೆ ಧ್ವಜಾರೋಹಣ ಮಾಡಲು ಹಿಂದೇಟು ಹಾಕಿದ್ದರು. ಇದನ್ನು ಖಂಡಿಸಿ ಈಗಾಗಲೇ ರಾಜ್ಯದಾದ್ಯಂತ ಪ್ರತಿಭಟನೆ, ಬಂದ್ ನಡೆದಿದೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ, ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿತ್ತು’ ಎಂದು ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.