‘ರಾಜ್ಯದಲ್ಲಿ ಸಮುದಾಯದ 45 ಲಕ್ಷ ಜನರು ಇದ್ದಾರೆ. ಈಚಿನವರೆಗೂ ನಮ್ಮ ಸಮುದಾಯಕ್ಕೆ ಸರ್ಕಾರದ ನೆರವು ಮರೀಚಿಕೆಯಾಗಿತ್ತು. ಜನರ ಹೋರಾಟದ ಫಲವಾಗಿ ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಕರ್ಮ ಅಭಿವೃದ್ಧಿ ನಿಗಮ ಸ್ಥಾಪಿಸಿದ್ದಲ್ಲದೆ, ವಿಶ್ವಕರ್ಮ ಜಯಂತಿಯನ್ನು ಸರ್ಕಾರಿ ಆಚರಣೆಯಾಗಿ ಜಾರಿಗೆ ತಂದರು. ಮೈತ್ರಿ ಸರ್ಕಾರದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಮ್ಮ ಬಜೆಟ್ನಲ್ಲಿ ಅಮರಶಿಲ್ಪಿ ಜಕಣಾಚಾರಿ ಶಿಲ್ಪಕಲಾ ಕೇಂದ್ರ ಸ್ಥಾಪಿಸಿ ಅನುದಾನ ಒದಗಿಸಿದ್ದಾರೆ. ಇದರ ಋಣವು ಸಮುದಾಯದ ಜನರ ಮೇಲಿದೆ’ ಎಂದರು.