<p>ರಾಮನಗರ<strong>: ‘</strong>ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸೆ. 17ರಂದು ವಿಶ್ವಕರ್ಮ ಜಯಂತಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಕಚೇರಿಯ ಸಹಾಯಕ ನಿರ್ದೇಶಕ ಜಯಂತ್ ಸೂಚನೆ ನೀಡಿದರು.</p>.<p>ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಿಶ್ವಕರ್ಮ ಜಯಂತಿ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ‘ಕಾರ್ಯಕ್ರಮವನ್ನು ನಗರದ ಕಾಳಿಕಾಂಭ ದೇವಸ್ಥಾನದ ಆವರಣದಲ್ಲಿ ಆಯೋಜಿಸಲಾಗುವುದು’ ಎಂದು ತಿಳಿಸಿದರು.</p>.<p>‘ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾರ್ವಜನಿಕರಿಗೆ ಊಟ, ಕುಡಿಯುವ ನೀರಿನ ವ್ಯವಸ್ಥೆ, ಆಹ್ವಾನ ಪತ್ರಿಕೆ ಮುದ್ರಣ, ಕಲಾತಂಡಗಳು ಹಾಗೂ ಉಪನ್ಯಾಸಕರ ನೇಮಕ ಕುರಿತು ಅಗತ್ಯ ವ್ಯವಸ್ಥೆಯನ್ನು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಮಾಡಿಕೊಳ್ಳಬೇಕು’ ಎಂದು ನಿರ್ದೇಶನ ನೀಡಿದರು.</p>.<p>‘ವಿಶ್ವಕರ್ಮ ಜಯಂತಿಯ ದಿನನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಿಂದ ಕಾಳಿಕಾಂಭ ದೇವಸ್ಥಾನದವರೆಗೆ ವಿಶ್ವಕರ್ಮರ ಚಿತ್ರದ ಮೆರವಣಿಗೆಯನ್ನು ಆಯೋಜಿಸಬೇಕು. ವಿವಿಧ ಜಾನಪದ ಕಲಾತಂಡಗಳು ಸಹ ಮೆರವಣಿಯಲ್ಲಿ ಪಾಲ್ಗೊಳ್ಳುವಂತೆ ವ್ಯವಸ್ಥೆ ಮಾಡಬೇಕು’ ಎಂದು ತಿಳಿಸಿದರು.</p>.<p>ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೆ. ಸತೀಶ್, ವಿಶ್ವಕರ್ಮ ಸಮುದಾಯದ ಮುಖಂಡರು ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಮನಗರ<strong>: ‘</strong>ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸೆ. 17ರಂದು ವಿಶ್ವಕರ್ಮ ಜಯಂತಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಕಚೇರಿಯ ಸಹಾಯಕ ನಿರ್ದೇಶಕ ಜಯಂತ್ ಸೂಚನೆ ನೀಡಿದರು.</p>.<p>ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಿಶ್ವಕರ್ಮ ಜಯಂತಿ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ‘ಕಾರ್ಯಕ್ರಮವನ್ನು ನಗರದ ಕಾಳಿಕಾಂಭ ದೇವಸ್ಥಾನದ ಆವರಣದಲ್ಲಿ ಆಯೋಜಿಸಲಾಗುವುದು’ ಎಂದು ತಿಳಿಸಿದರು.</p>.<p>‘ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾರ್ವಜನಿಕರಿಗೆ ಊಟ, ಕುಡಿಯುವ ನೀರಿನ ವ್ಯವಸ್ಥೆ, ಆಹ್ವಾನ ಪತ್ರಿಕೆ ಮುದ್ರಣ, ಕಲಾತಂಡಗಳು ಹಾಗೂ ಉಪನ್ಯಾಸಕರ ನೇಮಕ ಕುರಿತು ಅಗತ್ಯ ವ್ಯವಸ್ಥೆಯನ್ನು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಮಾಡಿಕೊಳ್ಳಬೇಕು’ ಎಂದು ನಿರ್ದೇಶನ ನೀಡಿದರು.</p>.<p>‘ವಿಶ್ವಕರ್ಮ ಜಯಂತಿಯ ದಿನನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಿಂದ ಕಾಳಿಕಾಂಭ ದೇವಸ್ಥಾನದವರೆಗೆ ವಿಶ್ವಕರ್ಮರ ಚಿತ್ರದ ಮೆರವಣಿಗೆಯನ್ನು ಆಯೋಜಿಸಬೇಕು. ವಿವಿಧ ಜಾನಪದ ಕಲಾತಂಡಗಳು ಸಹ ಮೆರವಣಿಯಲ್ಲಿ ಪಾಲ್ಗೊಳ್ಳುವಂತೆ ವ್ಯವಸ್ಥೆ ಮಾಡಬೇಕು’ ಎಂದು ತಿಳಿಸಿದರು.</p>.<p>ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೆ. ಸತೀಶ್, ವಿಶ್ವಕರ್ಮ ಸಮುದಾಯದ ಮುಖಂಡರು ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>