<p><strong>ಕನಕಪುರ</strong>: ರಾಮನಗರ ಜಿಲ್ಲೆಯ ದಲಿತ ಸಂಘಟನೆಗಳ ಮುಖಂಡರು ಭಾನುವಾರ ಕನಕಪುರ ಮಳಗಾಳು ಗ್ರಾಮಕ್ಕೆ ಭೇಟಿ ನೀಡಿ, ಹಲ್ಲೆಗೊಳಗಾಗಿ ಕೈ ಕಳೆದುಕೊಂಡ ಅನೀಶ್ ಪೋಷಕರಿಗೆ ಧೈರ್ಯ ತುಂಬಿದರು.</p>.<p>ಮಳಗಾಳು ಎಕೆ ಕಾಲೋನಿಯಲ್ಲಿ ಕೆಲವು ದಿನಗಳ ಹಿಂದೆ ರೌಡಿಗಳ ದಾಳಿಯಲ್ಲಿ ಅನೀಶ್ ಅವರ ಎಡಗೈ ತುಂಡಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಈ ದೌರ್ಜನ್ಯವನ್ನು ಖಂಡಿಸಿ ರಾಮನಗರ ಜಿಲ್ಲೆಯ ಮಾಗಡಿ, ಚನ್ನಪಟ್ಟಣ, ರಾಮನಗರ, ಹಾರೋಹಳ್ಳಿ, ಕನಕಪುರದ ನೂರಕ್ಕೂ ಹೆಚ್ಚು ದಲಿತ ಮುಖಂಡರು ಮಳಗಾಳು ಗ್ರಾಮಕ್ಕೆ ಭೇಟಿ ನೀಡಿದ್ದರು.</p>.<p>ಈ ವೇಳೆ ಸಮತಾ ಸೈನಿಕ ದಳದ ಜಿ.ಗೋವಿಂದಯ್ಯ, ರಾಮನಗರ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಶಿವಕುಮಾರಸ್ವಾಮಿ, ಕನಕಪುರದ ಮಲ್ಲಿಕಾರ್ಜುನ್, ಶಿವಲಿಂಗಯ್ಯ, ಚನ್ನಪಟ್ಟಣದ ಶಿವರಾಮ್ ಸಂತ್ರಸ್ತರೊಂದಿಗೆ ಮಾತನಾಡಿ, ಆತ್ಮಸ್ಥೈರ್ಯ ತುಂಬಿದರು.</p>.<p>ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಗೃಹ ಸಚಿವರು ಈ ಘಟನೆಯನ್ನು ಲಘುವಾಗಿ ತೆಗೆದುಕೊಳ್ಳಬಾರದು, ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು, ಕೈ ಕಳೆದುಕೊಂಡಿರುವ ಅನೀಶ್ಗೆ ಸರ್ಕಾರಿ ಉದ್ಯೋಗ ನೀಡಬೇಕು ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ</strong>: ರಾಮನಗರ ಜಿಲ್ಲೆಯ ದಲಿತ ಸಂಘಟನೆಗಳ ಮುಖಂಡರು ಭಾನುವಾರ ಕನಕಪುರ ಮಳಗಾಳು ಗ್ರಾಮಕ್ಕೆ ಭೇಟಿ ನೀಡಿ, ಹಲ್ಲೆಗೊಳಗಾಗಿ ಕೈ ಕಳೆದುಕೊಂಡ ಅನೀಶ್ ಪೋಷಕರಿಗೆ ಧೈರ್ಯ ತುಂಬಿದರು.</p>.<p>ಮಳಗಾಳು ಎಕೆ ಕಾಲೋನಿಯಲ್ಲಿ ಕೆಲವು ದಿನಗಳ ಹಿಂದೆ ರೌಡಿಗಳ ದಾಳಿಯಲ್ಲಿ ಅನೀಶ್ ಅವರ ಎಡಗೈ ತುಂಡಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಈ ದೌರ್ಜನ್ಯವನ್ನು ಖಂಡಿಸಿ ರಾಮನಗರ ಜಿಲ್ಲೆಯ ಮಾಗಡಿ, ಚನ್ನಪಟ್ಟಣ, ರಾಮನಗರ, ಹಾರೋಹಳ್ಳಿ, ಕನಕಪುರದ ನೂರಕ್ಕೂ ಹೆಚ್ಚು ದಲಿತ ಮುಖಂಡರು ಮಳಗಾಳು ಗ್ರಾಮಕ್ಕೆ ಭೇಟಿ ನೀಡಿದ್ದರು.</p>.<p>ಈ ವೇಳೆ ಸಮತಾ ಸೈನಿಕ ದಳದ ಜಿ.ಗೋವಿಂದಯ್ಯ, ರಾಮನಗರ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಶಿವಕುಮಾರಸ್ವಾಮಿ, ಕನಕಪುರದ ಮಲ್ಲಿಕಾರ್ಜುನ್, ಶಿವಲಿಂಗಯ್ಯ, ಚನ್ನಪಟ್ಟಣದ ಶಿವರಾಮ್ ಸಂತ್ರಸ್ತರೊಂದಿಗೆ ಮಾತನಾಡಿ, ಆತ್ಮಸ್ಥೈರ್ಯ ತುಂಬಿದರು.</p>.<p>ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಗೃಹ ಸಚಿವರು ಈ ಘಟನೆಯನ್ನು ಲಘುವಾಗಿ ತೆಗೆದುಕೊಳ್ಳಬಾರದು, ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು, ಕೈ ಕಳೆದುಕೊಂಡಿರುವ ಅನೀಶ್ಗೆ ಸರ್ಕಾರಿ ಉದ್ಯೋಗ ನೀಡಬೇಕು ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>