<p><strong>ಚನ್ನಪಟ್ಟಣ</strong>: ನಗರದ ಮಿಲೇನಿಯಂ ಪಬ್ಲಿಕ್ ಶಾಲೆಯಲ್ಲಿ ಶುಭೋದಯ ಸಾಂಸ್ಕೃತಿಕ ಮತ್ತು ಕ್ರೀಡಾ ಕ್ಲಬ್ ಹಾಗೂ ಅನಿಕೇತನ ಕನ್ನಡ ಸಾಂಸ್ಕೃತಿಕ ಬಳಗ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಸ್ವಾಮಿ ವಿವೇಕಾನಂದ ಜಯಂತೋತ್ಸವ ನಡೆಯಿತು.</p>.<p>ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ವೇಳೆ ಶಿಕ್ಷಣ ಸಂಯೋಜಕ ಯೋಗೇಶ್ ಚಕ್ಕೆರೆ ಮಾತನಾಡಿದರು.</p>.<p>ಸಾಮಾಜಿಕ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದ ಮಹಾನ್ ದಾರ್ಶನಿಕ ಸ್ವಾಮಿ ವಿವೇಕಾನಂದರು. ಅವರ ಆದರ್ಶ ಬದುಕಿನ ಬಗ್ಗೆ ಇಂದಿನ ಯುವ ಜನತೆಗೆ ಅಗತ್ಯವಾಗಿ ತಿಳಿದುಕೊಳ್ಳಬೇಕಾಗಿದೆ ಎಂದರು.</p>.<p>ಸ್ವಾಮಿ ವಿವೇಕಾನಂದರು ಭಾರತೀಯರ ಬಗ್ಗೆ ವಿದೇಶಿಗರಲ್ಲಿ ಇದ್ದ ಕೀಳರಿಮೆಯನ್ನು ಹೋಗಲಾಡಿಸಿ, ವಿಶ್ವಕ್ಕೆ ಸಹೋದರತೆಯ ಸಂದೇಶ ಸಾರಿದ ಮಹಾಪುರುಷ. ಅವರ ದಿವ್ಯವಾಣಿಗಳು ಯುವಜನತೆಗೆ ಸ್ಫೂರ್ತಿ ನೀಡುತ್ತವೆ ಎಂದರು.</p>.<p>ಶುಭೋದಯ ಸಾಂಸ್ಕೃತಿಕ ಮತ್ತು ಕ್ರೀಡಾ ಕ್ಲಬ್ ಅಧ್ಯಕ್ಷ ಎಂ.ಶಿವಮಾದು ಮಾತನಾಡಿ, ಸ್ವಾಮಿ ವಿವೇಕಾನಂದರ ವ್ಯಕ್ತಿತ್ವ ದೊಡ್ಡದು, ಸಿದ್ಧಾಂತ ವಿಶಾಲವಾದದ್ದು, ಪ್ರತಿಯೊಬ್ಬರು ಸಹೋದರತೆ, ಸಮನ್ವಯತೆ, ಸಮಗ್ರತೆ ಹಾಗೂ ಭಾತೃತ್ವದಿಂದ ಬದುಕು ನಡೆಸಬೇಕು ಎಂದು ಸಾರಿದ ಮಹನೀಯರು ವಿವೇಕಾನಂದರು.</p>.<p>ಅರುಣ ಗೌಡ, ಸಿದ್ದರಾಜೇಗೌಡ, ಲಕ್ಷ್ಮಮ್ಮ, ಎಚ್.ಆರ್.ರಾಮಚಂದ್ರ, ಸಿ.ಎಸ್. ಶ್ರೀಕಂಠಯ್ಯ, ಅಂಕೇಗೌಡ, ಕೃಷ್ಣ, ಸಿ.ಕೆ.ಕೃಷ್ಣಯ್ಯ, ಕವಿತಾ, ಪೂರ್ಣಿಮಾ, ಪಂಕಜ, ಸಂಗೀತಾ, ಗೀತಾ, ಫಾತಿಮಾ, ಹರ್ಷಿತಾ, ಕುಸುಮ್ ಬಾನು, ರೀಹಾನ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ</strong>: ನಗರದ ಮಿಲೇನಿಯಂ ಪಬ್ಲಿಕ್ ಶಾಲೆಯಲ್ಲಿ ಶುಭೋದಯ ಸಾಂಸ್ಕೃತಿಕ ಮತ್ತು ಕ್ರೀಡಾ ಕ್ಲಬ್ ಹಾಗೂ ಅನಿಕೇತನ ಕನ್ನಡ ಸಾಂಸ್ಕೃತಿಕ ಬಳಗ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಸ್ವಾಮಿ ವಿವೇಕಾನಂದ ಜಯಂತೋತ್ಸವ ನಡೆಯಿತು.</p>.<p>ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ವೇಳೆ ಶಿಕ್ಷಣ ಸಂಯೋಜಕ ಯೋಗೇಶ್ ಚಕ್ಕೆರೆ ಮಾತನಾಡಿದರು.</p>.<p>ಸಾಮಾಜಿಕ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದ ಮಹಾನ್ ದಾರ್ಶನಿಕ ಸ್ವಾಮಿ ವಿವೇಕಾನಂದರು. ಅವರ ಆದರ್ಶ ಬದುಕಿನ ಬಗ್ಗೆ ಇಂದಿನ ಯುವ ಜನತೆಗೆ ಅಗತ್ಯವಾಗಿ ತಿಳಿದುಕೊಳ್ಳಬೇಕಾಗಿದೆ ಎಂದರು.</p>.<p>ಸ್ವಾಮಿ ವಿವೇಕಾನಂದರು ಭಾರತೀಯರ ಬಗ್ಗೆ ವಿದೇಶಿಗರಲ್ಲಿ ಇದ್ದ ಕೀಳರಿಮೆಯನ್ನು ಹೋಗಲಾಡಿಸಿ, ವಿಶ್ವಕ್ಕೆ ಸಹೋದರತೆಯ ಸಂದೇಶ ಸಾರಿದ ಮಹಾಪುರುಷ. ಅವರ ದಿವ್ಯವಾಣಿಗಳು ಯುವಜನತೆಗೆ ಸ್ಫೂರ್ತಿ ನೀಡುತ್ತವೆ ಎಂದರು.</p>.<p>ಶುಭೋದಯ ಸಾಂಸ್ಕೃತಿಕ ಮತ್ತು ಕ್ರೀಡಾ ಕ್ಲಬ್ ಅಧ್ಯಕ್ಷ ಎಂ.ಶಿವಮಾದು ಮಾತನಾಡಿ, ಸ್ವಾಮಿ ವಿವೇಕಾನಂದರ ವ್ಯಕ್ತಿತ್ವ ದೊಡ್ಡದು, ಸಿದ್ಧಾಂತ ವಿಶಾಲವಾದದ್ದು, ಪ್ರತಿಯೊಬ್ಬರು ಸಹೋದರತೆ, ಸಮನ್ವಯತೆ, ಸಮಗ್ರತೆ ಹಾಗೂ ಭಾತೃತ್ವದಿಂದ ಬದುಕು ನಡೆಸಬೇಕು ಎಂದು ಸಾರಿದ ಮಹನೀಯರು ವಿವೇಕಾನಂದರು.</p>.<p>ಅರುಣ ಗೌಡ, ಸಿದ್ದರಾಜೇಗೌಡ, ಲಕ್ಷ್ಮಮ್ಮ, ಎಚ್.ಆರ್.ರಾಮಚಂದ್ರ, ಸಿ.ಎಸ್. ಶ್ರೀಕಂಠಯ್ಯ, ಅಂಕೇಗೌಡ, ಕೃಷ್ಣ, ಸಿ.ಕೆ.ಕೃಷ್ಣಯ್ಯ, ಕವಿತಾ, ಪೂರ್ಣಿಮಾ, ಪಂಕಜ, ಸಂಗೀತಾ, ಗೀತಾ, ಫಾತಿಮಾ, ಹರ್ಷಿತಾ, ಕುಸುಮ್ ಬಾನು, ರೀಹಾನ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>