<p><strong>ಮಾಗಡಿ:</strong> ತಾಲ್ಲೂಕಿನ ಗ್ರಾಮೀಣ ಪ್ರದೇಶ ಮತ್ತು ಪಟ್ಟಣದಲ್ಲಿ ವಾರದಿಂದ ಕೋವಿಡ್ ಸೋಂಕು ಉಲ್ಬಣವಾಗುತ್ತಿದೆ. ಸಾವಿನ ಸಂಖ್ಯೆಯು ಅಧಿಕವಾಗುತ್ತಿದೆ. ಸೋಂಕು ಉಲ್ಬಣವಾಗುತ್ತಿದ್ದರೂ ಸಹ ಬೆಳಿಗ್ಗೆ ಮಾರುಕಟ್ಟೆಯಲ್ಲಿ ಜನಜಂಗುಳಿ ಸಹ ಕಡಿಮೆಯಾಗುತ್ತಿಲ್ಲ.</p>.<p>ತಾಲ್ಲೂಕಿನಲ್ಲಿ ಭಾನುವಾರ 127 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಇಬ್ಬರು ಬಲಿಯಾಗಿದ್ದಾರೆ. ಕೋವಿಡ್ ಸೋಂಕು ಹರಡದಂತೆ ತಡೆಗಟ್ಟಲು ಜಿಲ್ಲಾಡಳಿತ ಕಠಿಣ ಕ್ರಮಕೈಗೊಳ್ಳಬೇಕು ಎಂದು ಸಾರ್ವಜನಿಕರು ಮನವಿ ಮಾಡಿದ್ದಾರೆ.</p>.<p>ಪೊಲೀಸರು ಕೋವಿಡ್ ನಿಯಮ ಉಲ್ಲಂಘಿಸಿದವರ ವಿರುದ್ಧ ಪ್ರಕರಣ ದಾಖಲಿಸುತ್ತಿದ್ದರೂ ಸಹ ವಾಹನ ಸವಾರರು ವಿನಾಕಾರಣ ಸುತ್ತುತ್ತಿದ್ದಾರೆ.</p>.<p>ಶಾಸಕ ಎ. ಮಂಜುನಾಥ್ ಅವರಿಗೆ ಸೋಂಕು ದೃಢಪಟ್ಟಿದ್ದರಿಂದ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪುರಸಭೆ ಮುಖ್ಯಾಧಿಕಾರಿ ಮಹೇಶ್ ಎದೆನೋವಿನಿಂದ ಬಳಲುತ್ತಿದ್ದು, ಮೈಸೂರಿನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.</p>.<p>ತಹಶೀಲ್ದಾರ್ ಬಿ.ಜಿ. ಶ್ರೀನಿವಾಸಮೂರ್ತಿ, ತಾ.ಪಂ ಇಒ ಟಿ. ಪ್ರದೀಪ್, ತಾಲ್ಲೂಕು ವೈದ್ಯಾಧಿಕಾರಿ ಡಾ.ಸತೀಶ್, ಸಿಪಿಐ ಎ.ಎಂ. ಕುಮಾರ್ ಕೋವಿಡ್ ಹರಡದಂತೆ ನಿಗಾವಹಿಸಲು ಸುತ್ತುತ್ತಿದ್ದಾರೆ.</p>.<p>ಜನಪ್ರತಿನಿಧಿಗಳು ಮನೆ ಸೇರಿಕೊಂಡಿದ್ದಾರೆ. ಬಡವರ ನೆರವಿಗೆ ಮುಂದಾಗುತ್ತಿಲ್ಲ. ಸಂಕಟದ ಸಮಯದಲ್ಲಿ ಜನಸಾಮಾನ್ಯರ ಗೋಳು ಕೇಳುವವರಿಲ್ಲ ಎಂಬುದು ಸಾರ್ವಜನಿಕರ ಅಳಲು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಗಡಿ:</strong> ತಾಲ್ಲೂಕಿನ ಗ್ರಾಮೀಣ ಪ್ರದೇಶ ಮತ್ತು ಪಟ್ಟಣದಲ್ಲಿ ವಾರದಿಂದ ಕೋವಿಡ್ ಸೋಂಕು ಉಲ್ಬಣವಾಗುತ್ತಿದೆ. ಸಾವಿನ ಸಂಖ್ಯೆಯು ಅಧಿಕವಾಗುತ್ತಿದೆ. ಸೋಂಕು ಉಲ್ಬಣವಾಗುತ್ತಿದ್ದರೂ ಸಹ ಬೆಳಿಗ್ಗೆ ಮಾರುಕಟ್ಟೆಯಲ್ಲಿ ಜನಜಂಗುಳಿ ಸಹ ಕಡಿಮೆಯಾಗುತ್ತಿಲ್ಲ.</p>.<p>ತಾಲ್ಲೂಕಿನಲ್ಲಿ ಭಾನುವಾರ 127 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಇಬ್ಬರು ಬಲಿಯಾಗಿದ್ದಾರೆ. ಕೋವಿಡ್ ಸೋಂಕು ಹರಡದಂತೆ ತಡೆಗಟ್ಟಲು ಜಿಲ್ಲಾಡಳಿತ ಕಠಿಣ ಕ್ರಮಕೈಗೊಳ್ಳಬೇಕು ಎಂದು ಸಾರ್ವಜನಿಕರು ಮನವಿ ಮಾಡಿದ್ದಾರೆ.</p>.<p>ಪೊಲೀಸರು ಕೋವಿಡ್ ನಿಯಮ ಉಲ್ಲಂಘಿಸಿದವರ ವಿರುದ್ಧ ಪ್ರಕರಣ ದಾಖಲಿಸುತ್ತಿದ್ದರೂ ಸಹ ವಾಹನ ಸವಾರರು ವಿನಾಕಾರಣ ಸುತ್ತುತ್ತಿದ್ದಾರೆ.</p>.<p>ಶಾಸಕ ಎ. ಮಂಜುನಾಥ್ ಅವರಿಗೆ ಸೋಂಕು ದೃಢಪಟ್ಟಿದ್ದರಿಂದ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪುರಸಭೆ ಮುಖ್ಯಾಧಿಕಾರಿ ಮಹೇಶ್ ಎದೆನೋವಿನಿಂದ ಬಳಲುತ್ತಿದ್ದು, ಮೈಸೂರಿನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.</p>.<p>ತಹಶೀಲ್ದಾರ್ ಬಿ.ಜಿ. ಶ್ರೀನಿವಾಸಮೂರ್ತಿ, ತಾ.ಪಂ ಇಒ ಟಿ. ಪ್ರದೀಪ್, ತಾಲ್ಲೂಕು ವೈದ್ಯಾಧಿಕಾರಿ ಡಾ.ಸತೀಶ್, ಸಿಪಿಐ ಎ.ಎಂ. ಕುಮಾರ್ ಕೋವಿಡ್ ಹರಡದಂತೆ ನಿಗಾವಹಿಸಲು ಸುತ್ತುತ್ತಿದ್ದಾರೆ.</p>.<p>ಜನಪ್ರತಿನಿಧಿಗಳು ಮನೆ ಸೇರಿಕೊಂಡಿದ್ದಾರೆ. ಬಡವರ ನೆರವಿಗೆ ಮುಂದಾಗುತ್ತಿಲ್ಲ. ಸಂಕಟದ ಸಮಯದಲ್ಲಿ ಜನಸಾಮಾನ್ಯರ ಗೋಳು ಕೇಳುವವರಿಲ್ಲ ಎಂಬುದು ಸಾರ್ವಜನಿಕರ ಅಳಲು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>