ಕಳೆದ ಮೂರು ವಿಚಾರಣೆಗಳಿಗೆ ನಿತ್ಯಾನಂದ ಸತತ ಗೈರಾಗಿದ್ದರು. ಕಳೆದ ವಿಚಾರಣೆ ಸಂದರ್ಭದಲ್ಲಿ ಆರೋಪಿಯ ಖುದ್ದು ಹಾಜರಿಗೆ ನ್ಯಾಯಾಲಯವು ಸೂಚಿಸಿತ್ತು. ಆದಾಗ್ಯೂ ಗುರುವಾರ ನ್ಯಾಯಾಲಯಕ್ಕೆ ಗೈರಾದ ಕಾರಣ ನಿತ್ಯಾನಂದ ವಿರುದ್ಧ ನ್ಯಾಯಾಧೀಶ ಗೋಪಾಲಕೃಷ್ಣ ರೈ ವಾರೆಂಟ್ ಹೊರಡಿಸಿದರು. ಪ್ರಕರಣದ ವಿಚಾರಣೆಯನ್ನು ಇದೇ 14ಕ್ಕೆ ಮುಂದೂಡಲಾಯಿತು.