ರಾಮನಗರ: ನಗರದ ಹೊರವಲಯದಲ್ಲಿ ಇರುವ ಬೋಳಪ್ಪನಹಳ್ಳಿ ಕೆರೆಯಲ್ಲಿ ಬುಧವಾರ ಮುಂಜಾನೆ ಆನೆಯೊಂದು ಕಾಣಿಸಿಕೊಂಡಿದೆ.
ಚಿಕ್ಕಮಣ್ಣುಗುಡ್ಡೆ ಅರಣ್ಯ ಪ್ರದೇಶದಿಂದ ಆನೆ ಬಂದಿದ್ದು, ಸದ್ಯ ಕೆರೆಯೊಳಗೆ ಬೀಡು ಬಿಟ್ಟಿದೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿದ್ದು, ಸಂಜೆ ನಂತರ ಆನೆಯನ್ನು ಕಾಡಿನತ್ತ ಓಡಿಸಲು ಯೋಜಿಸಿದ್ದಾರೆ.