ತಾಲ್ಲೂಕಿನ ವಿರುಪಾಕ್ಷಿಪುರ, ಕೆ.ಜಿ.ಮಹಡಿ, ಹೊಂಗನೂರು, ಕೋಡಂಬಹಳ್ಳಿ, ಅಂಚೀಪುರ, ಹುಚ್ಚಯ್ಯನದೊಡ್ಡಿ ಗ್ರಾಮಗಳು ಸೇರಿದಂತೆ ಹಲವೆಡೆ ರೈತರ ಬೆಳೆಗಳಿಗೆ ನೀರು ನುಗ್ಗಿದೆ. ಬಾಳೆ, ತೆಂಗು, ಜೋಳ, ಭತ್ತ ಸೇರಿದಂತೆ ಬೆಳೆಗಳು ನೀರುಪಾಲಾಗಿವೆ. ತಾಲ್ಲೂಕಿನ ಹುಣಸನಹಳ್ಳಿ, ಹುಚ್ಚಯ್ಯನದೊಡ್ಡಿ, ಪಟ್ಟಣದ ಕೆಲವು ಬಡಾವಣೆಗಳ ತಗ್ಗು ಪ್ರದೇಶದಲ್ಲಿರುವ ಮನೆಗಳಿಗೆ ನೀರು ನುಗ್ಗಿದ್ದು ಮನೆಯಲ್ಲಿದ್ದ ವಸ್ತುಗಳೆಲ್ಲವೂ ನೀರು ಪಾಲಾಗಿವೆ.