<p><strong>ಚನ್ನಪಟ್ಟಣ:</strong> ಬಾಣಗಹಳ್ಳಿ ಗ್ರಾಮ ಪಂಚಾಯತಿ ಕುಡಿಯುವ ನೀರು ಪೂರೈಸುವ ಪೈಪ್ಲೈನ್ ಅಳವಡಿಸದೆ ಅನಗತ್ಯ ತೊಂದರೆ ನೀಡುತ್ತಿದೆ ಎಂದು ಆರೋಪಿಸಿ ತಾಲ್ಲೂಕಿನ ನಾಗಾಪುರದ ವ್ಯಕ್ತಿಯೊಬ್ಬರು ಕುಟುಂಬ ಸದಸ್ಯರ ಸಮೇತ ತಾಲ್ಲೂಕು ಪಂಚಾಯಿತಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು. </p>.<p>ನಾಗಾಪುರದ ಅನಂತ ಎಂಬುವರು ತಮ್ಮ ತಾಯಿ ಹಾಗೂ ಇಬ್ಬರು ಮಕ್ಕಳ ಜೊತೆ ಪ್ರತಿಭಟನೆ ನಡೆಸಿದರು. </p>.<p>‘ಗ್ರಾಮದ ಹೊರವಲಯದಲ್ಲಿರುವ ಮನೆಗೆ ನೀರು ಪೂರೈಸುವ ಪೈಪ್ಲೈನ್ ಅಳವಡಿಸಲು ಗ್ರಾ.ಪಂ. ಅಧಿಕಾರಿಗಳ ಸಲಹೆಯಂತೆ ಶುಲ್ಕ ಪಾವತಿಸಿದ್ದೇನೆ. ಶುಲ್ಕ ಕಟ್ಟಿದ ನಂತರವೂ ನೀರು ಪೂರೈಕೆ ಮಾಡದೆ ಅಲೆಸಲಾಗುತ್ತಿದೆ. ಈ ಬಗ್ಗೆ ಮನವಿ ಮಾಡಿಕೊಂಡರೂ ಪ್ರಯೋಜನವಾಗಿಲ್ಲ. ಹಾಗಾಗಿ ಸಮಸ್ಯೆಗೆ ಪರಿಹಾರ ಸಿಗುವವರೆಗೂ ಅಹೋರಾತ್ರಿ ಪ್ರತಿಭಟನೆ ಮಾಡುತ್ತೇವೆ’ ಎಂದು ಧರಣಿನಿರತರು ಪಟ್ಟು ಹಿಡಿದರು.<br><br>ಸ್ಥಳಕ್ಕೆ ಬಂದ ತಾ.ಪಂ. ಇ.ಒ ಸಂದೀಪ್, ಸಮಸ್ಯೆ ಇತ್ಯರ್ಥಕ್ಕೆ 15 ದಿನ ಸಮಯಾವಕಾಶ ಕೇಳಿದರು. ನಂತರ ಪ್ರತಿಭಟನೆ ವಾಪಸ್ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ:</strong> ಬಾಣಗಹಳ್ಳಿ ಗ್ರಾಮ ಪಂಚಾಯತಿ ಕುಡಿಯುವ ನೀರು ಪೂರೈಸುವ ಪೈಪ್ಲೈನ್ ಅಳವಡಿಸದೆ ಅನಗತ್ಯ ತೊಂದರೆ ನೀಡುತ್ತಿದೆ ಎಂದು ಆರೋಪಿಸಿ ತಾಲ್ಲೂಕಿನ ನಾಗಾಪುರದ ವ್ಯಕ್ತಿಯೊಬ್ಬರು ಕುಟುಂಬ ಸದಸ್ಯರ ಸಮೇತ ತಾಲ್ಲೂಕು ಪಂಚಾಯಿತಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು. </p>.<p>ನಾಗಾಪುರದ ಅನಂತ ಎಂಬುವರು ತಮ್ಮ ತಾಯಿ ಹಾಗೂ ಇಬ್ಬರು ಮಕ್ಕಳ ಜೊತೆ ಪ್ರತಿಭಟನೆ ನಡೆಸಿದರು. </p>.<p>‘ಗ್ರಾಮದ ಹೊರವಲಯದಲ್ಲಿರುವ ಮನೆಗೆ ನೀರು ಪೂರೈಸುವ ಪೈಪ್ಲೈನ್ ಅಳವಡಿಸಲು ಗ್ರಾ.ಪಂ. ಅಧಿಕಾರಿಗಳ ಸಲಹೆಯಂತೆ ಶುಲ್ಕ ಪಾವತಿಸಿದ್ದೇನೆ. ಶುಲ್ಕ ಕಟ್ಟಿದ ನಂತರವೂ ನೀರು ಪೂರೈಕೆ ಮಾಡದೆ ಅಲೆಸಲಾಗುತ್ತಿದೆ. ಈ ಬಗ್ಗೆ ಮನವಿ ಮಾಡಿಕೊಂಡರೂ ಪ್ರಯೋಜನವಾಗಿಲ್ಲ. ಹಾಗಾಗಿ ಸಮಸ್ಯೆಗೆ ಪರಿಹಾರ ಸಿಗುವವರೆಗೂ ಅಹೋರಾತ್ರಿ ಪ್ರತಿಭಟನೆ ಮಾಡುತ್ತೇವೆ’ ಎಂದು ಧರಣಿನಿರತರು ಪಟ್ಟು ಹಿಡಿದರು.<br><br>ಸ್ಥಳಕ್ಕೆ ಬಂದ ತಾ.ಪಂ. ಇ.ಒ ಸಂದೀಪ್, ಸಮಸ್ಯೆ ಇತ್ಯರ್ಥಕ್ಕೆ 15 ದಿನ ಸಮಯಾವಕಾಶ ಕೇಳಿದರು. ನಂತರ ಪ್ರತಿಭಟನೆ ವಾಪಸ್ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>