ಕನಕಪುರ ತಾಲ್ಲೂಕಿನ ದೊಡ್ಡಾಲಹಳ್ಳಿ ಗ್ರಾಮದಲ್ಲಿ ಮಂಗಳವಾರ ಪತ್ನಿ ಉಷಾ ಜೊತೆಗೂಡಿ ಮತದಾನ ಮಾಡಿದ ಸಂದರ್ಭ ಅವರು ಪತ್ರಕರ್ತರ ಜೊತೆ ಮಾತನಾಡಿದರು. ‘ಜೆಡಿಎಸ್ನವರೇನು ದಡ್ಡರಲ್ಲ. ಅವರಿಗೆ ಅವರದ್ದೇ ಆದ ಅನುಭವ ಇದೆ. ಅವರು ಏನು ಬೇಕಾದರೂ ತೀರ್ಮಾನ ಕೈಗೊಳ್ಳಲಿ. ಅದರಿಂದ ಕಾಂಗ್ರೆಸ್ಗೆ ಯಾವುದೇ ತೊಂದರೆ ಇಲ್ಲ. ನಮಗೆ ನಮ್ಮ ಪಕ್ಷ, ಕಾರ್ಯಕರ್ತರಷ್ಟೇ ಮುಖ್ಯ’ ಎಂದರು.