ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಯುವಿಹಾರಕ್ಕೆ ತೆರಳಿದ್ದ ಮಹಿಳೆಯರ ಸರ ಕಳವು

Last Updated 19 ಸೆಪ್ಟೆಂಬರ್ 2021, 5:08 IST
ಅಕ್ಷರ ಗಾತ್ರ

ಚನ್ನಪಟ್ಟಣ: ತಾಲ್ಲೂಕಿನ ದೇವರಹಳ್ಳಿಯಲ್ಲಿ ವಾಯುವಿಹಾರ ನಡೆಸುತ್ತಿದ್ದ ಮಹಿಳೆಯರಿಬ್ಬರ ಚಿನ್ನದ ಸರಗಳನ್ನು ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಶನಿವಾರ ನಡೆದಿದೆ.

ಗ್ರಾಮದ ಸವಿತಾ ಹಾಗೂ ರೇಣುಕಾ ಇಬ್ಬರು ಮನೆಯ ಮುಂದಿನ ರಸ್ತೆಯಲ್ಲಿ ವಾಯುವಿಹಾರ ನಡೆಸುತ್ತಿದ್ದರು. ಈ ವೇಳೆ ಹಿಂಬದಿಯಿಂದ ಬೈಕ್‌ನಲ್ಲಿ ಬಂದ ಇಬ್ಬರು ಏಕಾಏಕಿ ಚಿನ್ನದ ಸರಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ.

ಸುಮಾರು 50 ಗ್ರಾಂ ತೂಕದ ಸುಮಾರು ₹ 2 ಲಕ್ಷ ಮೌಲ್ಯದ ಚಿನ್ನದ ಸರಗಳು ಕಳ್ಳತನವಾಗಿದ್ದು, ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.

ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT