ಚನ್ನಪಟ್ಟಣ: ತಾಲ್ಲೂಕಿನ ದೇವರಹಳ್ಳಿಯಲ್ಲಿ ವಾಯುವಿಹಾರ ನಡೆಸುತ್ತಿದ್ದ ಮಹಿಳೆಯರಿಬ್ಬರ ಚಿನ್ನದ ಸರಗಳನ್ನು ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಶನಿವಾರ ನಡೆದಿದೆ.
ಗ್ರಾಮದ ಸವಿತಾ ಹಾಗೂ ರೇಣುಕಾ ಇಬ್ಬರು ಮನೆಯ ಮುಂದಿನ ರಸ್ತೆಯಲ್ಲಿ ವಾಯುವಿಹಾರ ನಡೆಸುತ್ತಿದ್ದರು. ಈ ವೇಳೆ ಹಿಂಬದಿಯಿಂದ ಬೈಕ್ನಲ್ಲಿ ಬಂದ ಇಬ್ಬರು ಏಕಾಏಕಿ ಚಿನ್ನದ ಸರಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ.
ಸುಮಾರು 50 ಗ್ರಾಂ ತೂಕದ ಸುಮಾರು ₹ 2 ಲಕ್ಷ ಮೌಲ್ಯದ ಚಿನ್ನದ ಸರಗಳು ಕಳ್ಳತನವಾಗಿದ್ದು, ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.