<p><strong>ರಾಮನಗರ</strong>: ಸಮಾಜದಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾಗಿದ್ದು, ಅವರು ಸಾಮಾಜಿಕ ಸಂಬಂಧಗಳ ಕೊಂಡಿಯನ್ನು ವಿಸ್ತರಿಸಬೇಕು ಎಂದು ಬೆಂಗಳೂರು ವಿಶ್ವವಿದ್ಯಾಲಯದ ರಾಮನಗರ ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ಡಿ. ಡೊಮಿನಿಕ್ ಅಭಿಪ್ರಾಯಪಟ್ಟರು.</p>.<p>ನಗರದ ಸ್ನಾತಕೋತ್ತರ ಕೇಂದ್ರದಲ್ಲಿ ಶುಕ್ರವಾರ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ಶಿಕ್ಷಕರು ವಿದ್ಯಾರ್ಥಿಗಳ ಸಾಮರ್ಥ್ಯವನ್ನು ಅರಿತು ಅದಕ್ಕೆ ಅನುಗುಣವಾಗಿ ರೂಪಿಸಬೇಕು. ಶೋಷಿತ ಸಮುದಾಯಗಳು ಇಂದು ಅಕ್ಷರ ವಂಚಿತ ಸಮುದಾಯಗಳಾಗಿ ಕಾಣಿಸುತ್ತಿದ್ದರೂ ಪಾರಂಪರಿಕವಾಗಿ ಅವರಲ್ಲಿ ಸಾಂಪ್ರದಾಯಿಕವಲ್ಲದ ಶಿಕ್ಷಣದ ಅರಿವು ಸುದೀರ್ಘ ಕಾಲದಿಂದಲು ಅಂತರ್ಗತವಾಗಿದ್ದು, ಅದು ಇಂದು ಮುನ್ನೆಲೆಗೆ ಬರಬೇಕಾಗಿದೆ. ಈ ದಿಕ್ಕಿನಲ್ಲಿ ಶಿಕ್ಷಕರು ಚಿಂತಿಸಿ ಕಾರ್ಯೋನ್ಮುಖರಾಗಬೇಕಾಗಿದೆ ಎಂದರು.</p>.<p>ಶಿಕ್ಷಣ, ಲಿಂಗ ಅಸಮಾನತೆ, ಶೋಷಣೆ ಮುಕ್ತ ಸಮಾಜದ ನಿರ್ಮಾಣಕ್ಕೆ ದಾರಿದೀಪವಾಗುತ್ತದೆ ಎಂಬುದನ್ನು ಆಧುನಿಕ ಭಾರತದ ಇತಿಹಾಸದಲ್ಲಿ ಮೊದಲಿಗೆ ಶಿಕ್ಷಕರಾಗಿ ಜ್ಯೋತಿ ಬಾಪುಲೆ, ಸಾವಿತ್ರಿಬಾಯಿ ಪುಲೆ ಮತ್ತು ಫಾತಿಮಾಶೇಖ್ ನಿರ್ವಹಿಸಿದ ಕಾರ್ಯಗಳು ಇಂದಿನ ಶಿಕ್ಷಕರಿಗೆ ಆದರ್ಶವಾಗಬೇಕಾಗಿದೆ ಎಂದರು.</p>.<p>ರಾಜ್ಯಶಾಸ್ತ್ರ ಉಪನ್ಯಾಸಕ ರಂಗಸ್ವಾಮಿ ಮಾತನಾಡಿ, ರಾಷ್ಟ್ರಪತಿ ಕೆ.ಆರ್. ನಾರಾಯಣ್ ಅವರ ಬದುಕಿಗೆ ಪ್ರೇರಣೆಯಾದ ಶಿಕ್ಷಕಿಯ ಪಾತ್ರವನ್ನು ತಿಳಿಸಿದರು.</p>.<p>ಅರ್ಥಶಾಸ್ತ್ರ ಉಪನ್ಯಾಸಕಿ ಎಂ. ಶ್ವೇತಾ, ಕನ್ನಡ ವಿಭಾಗದ ಲಕ್ಷ್ಮಿನಾರಾಯಣಸ್ವಾಮಿ, ವಿದ್ಯಾರ್ಥಿಗಳಾದ ಮಹೇಶ್, ರಾಜು, ಜ್ಯೋತಿ, ಮಾನಸಾ, ಯಶಸ್ವಿನಿ ಮಾತನಾಡಿದರು.</p>.<p>ಇತಿಹಾಸ ವಿಭಾಗದ ರವಿಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಕನ್ನಡ ವಿಭಾಗದ ಉಪನ್ಯಾಸಕ ಎಸ್.ಎಂ. ಗೋಪಿ ಸ್ವಾಗತಿಸಿದರು. ಗ್ರಾಮೀಣಾಭಿವೃದ್ಧಿ ವಿಭಾಗದ ಉಪನ್ಯಾಸಕ ಎಂ.ಪಿ. ಶ್ರೀರಂಗನಾಥ್<br />ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ</strong>: ಸಮಾಜದಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾಗಿದ್ದು, ಅವರು ಸಾಮಾಜಿಕ ಸಂಬಂಧಗಳ ಕೊಂಡಿಯನ್ನು ವಿಸ್ತರಿಸಬೇಕು ಎಂದು ಬೆಂಗಳೂರು ವಿಶ್ವವಿದ್ಯಾಲಯದ ರಾಮನಗರ ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ಡಿ. ಡೊಮಿನಿಕ್ ಅಭಿಪ್ರಾಯಪಟ್ಟರು.</p>.<p>ನಗರದ ಸ್ನಾತಕೋತ್ತರ ಕೇಂದ್ರದಲ್ಲಿ ಶುಕ್ರವಾರ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ಶಿಕ್ಷಕರು ವಿದ್ಯಾರ್ಥಿಗಳ ಸಾಮರ್ಥ್ಯವನ್ನು ಅರಿತು ಅದಕ್ಕೆ ಅನುಗುಣವಾಗಿ ರೂಪಿಸಬೇಕು. ಶೋಷಿತ ಸಮುದಾಯಗಳು ಇಂದು ಅಕ್ಷರ ವಂಚಿತ ಸಮುದಾಯಗಳಾಗಿ ಕಾಣಿಸುತ್ತಿದ್ದರೂ ಪಾರಂಪರಿಕವಾಗಿ ಅವರಲ್ಲಿ ಸಾಂಪ್ರದಾಯಿಕವಲ್ಲದ ಶಿಕ್ಷಣದ ಅರಿವು ಸುದೀರ್ಘ ಕಾಲದಿಂದಲು ಅಂತರ್ಗತವಾಗಿದ್ದು, ಅದು ಇಂದು ಮುನ್ನೆಲೆಗೆ ಬರಬೇಕಾಗಿದೆ. ಈ ದಿಕ್ಕಿನಲ್ಲಿ ಶಿಕ್ಷಕರು ಚಿಂತಿಸಿ ಕಾರ್ಯೋನ್ಮುಖರಾಗಬೇಕಾಗಿದೆ ಎಂದರು.</p>.<p>ಶಿಕ್ಷಣ, ಲಿಂಗ ಅಸಮಾನತೆ, ಶೋಷಣೆ ಮುಕ್ತ ಸಮಾಜದ ನಿರ್ಮಾಣಕ್ಕೆ ದಾರಿದೀಪವಾಗುತ್ತದೆ ಎಂಬುದನ್ನು ಆಧುನಿಕ ಭಾರತದ ಇತಿಹಾಸದಲ್ಲಿ ಮೊದಲಿಗೆ ಶಿಕ್ಷಕರಾಗಿ ಜ್ಯೋತಿ ಬಾಪುಲೆ, ಸಾವಿತ್ರಿಬಾಯಿ ಪುಲೆ ಮತ್ತು ಫಾತಿಮಾಶೇಖ್ ನಿರ್ವಹಿಸಿದ ಕಾರ್ಯಗಳು ಇಂದಿನ ಶಿಕ್ಷಕರಿಗೆ ಆದರ್ಶವಾಗಬೇಕಾಗಿದೆ ಎಂದರು.</p>.<p>ರಾಜ್ಯಶಾಸ್ತ್ರ ಉಪನ್ಯಾಸಕ ರಂಗಸ್ವಾಮಿ ಮಾತನಾಡಿ, ರಾಷ್ಟ್ರಪತಿ ಕೆ.ಆರ್. ನಾರಾಯಣ್ ಅವರ ಬದುಕಿಗೆ ಪ್ರೇರಣೆಯಾದ ಶಿಕ್ಷಕಿಯ ಪಾತ್ರವನ್ನು ತಿಳಿಸಿದರು.</p>.<p>ಅರ್ಥಶಾಸ್ತ್ರ ಉಪನ್ಯಾಸಕಿ ಎಂ. ಶ್ವೇತಾ, ಕನ್ನಡ ವಿಭಾಗದ ಲಕ್ಷ್ಮಿನಾರಾಯಣಸ್ವಾಮಿ, ವಿದ್ಯಾರ್ಥಿಗಳಾದ ಮಹೇಶ್, ರಾಜು, ಜ್ಯೋತಿ, ಮಾನಸಾ, ಯಶಸ್ವಿನಿ ಮಾತನಾಡಿದರು.</p>.<p>ಇತಿಹಾಸ ವಿಭಾಗದ ರವಿಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಕನ್ನಡ ವಿಭಾಗದ ಉಪನ್ಯಾಸಕ ಎಸ್.ಎಂ. ಗೋಪಿ ಸ್ವಾಗತಿಸಿದರು. ಗ್ರಾಮೀಣಾಭಿವೃದ್ಧಿ ವಿಭಾಗದ ಉಪನ್ಯಾಸಕ ಎಂ.ಪಿ. ಶ್ರೀರಂಗನಾಥ್<br />ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>