<p><strong>ಕನಕಪುರ: </strong>ಇಲ್ಲಿನ ಬಸವೇಶ್ವರ ನಗರದಲ್ಲಿ ಪತಿಯ ಸಾವಿನಿಂದ ಮನನೊಂದ ಮೂರು ತಿಂಗಳ ಗರ್ಭಿಣಿಯಾಗಿದ್ದ ಪತ್ನಿ ಗುರುವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಬೆಸ್ಕಾಂ ವಿಭಾಗೀಯ ಕಚೇರಿಯಲ್ಲಿ ಸಹಾಯಕರಾಗಿದ್ದ ನಂದಿನಿ (28) ಆತ್ಮಹತ್ಯೆ ಮಾಡಿಕೊಂಡವರು.</p>.<p>ತಂದೆ ಶಾಂತಮಲ್ಲಪ್ಪ ಅವರು ಕೆಇಬಿಯಲ್ಲಿ ಲೈನ್ಮನ್ ಆಗಿದ್ದು, ಕೆಲಸದಲ್ಲಿ ಇರುವಾಗಲೇ ತೀರಿಕೊಂಡಿ<br />ದ್ದರು. ಅನುಕಂಪದ ಆಧಾರದ ಮೇಲೆ ನಂದಿನಿ ಅವರಿಗೆ 3 ವರ್ಷಗಳ ಹಿಂದೆ ಬೆಸ್ಕಾಂನಲ್ಲಿ ತಂದೆಯ ಕೆಲಸ ಸಿಕ್ಕಿತ್ತು.</p>.<p>ಎರಡು ವರ್ಷದ ಹಿಂದೆ ಮೈಸೂರು ಮೂಲದ ಉದ್ಯಮಿ ಸತೀಶ್ ಎಂಬುವರನ್ನು ಪ್ರೀತಿಸಿ ವಿವಾಹವಾಗಿದ್ದರು. ಇಲ್ಲಿನ ಬಸವೇಶ್ವರ ನಗರದಲ್ಲಿ ಮನೆ ಮಾಡಿಕೊಂಡು ನೆಲೆಸಿದ್ದರು. ಸತೀಶ್ ತಾಯಿ ಮೈಸೂರಿನಲ್ಲಿ ನೆಲೆಸಿದ್ದರು.</p>.<p>ಒಂದು ವಾರದ ಹಿಂದೆ ಸತೀಶ್ ತಾಯಿ ಕೊರೊನಾ ಸೋಂಕಿಗೆ ಬಲಿಯಾಗಿದ್ದರು. ಸತೀಶ್ಗೂ ಸೋಂಕು ದೃಢಪಟ್ಟು ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಮೂರು ದಿನಗಳ ಹಿಂದೆಯಷ್ಟೇ ಮೃತಪಟ್ಟಿದ್ದರು.ಪತಿಯ ಸಾವಿನ ನಂತರ ನಂದಿನಿ ಮಾನಸಿಕವಾಗಿ ನೊಂದಿದ್ದರು.ಗುರುವಾರ ಮಧ್ಯಾಹ್ನ ಸುಮಾರು 1 ಗಂಟೆಯಲ್ಲಿ ರೂಂನಲ್ಲಿ ಕೆಲಸವಿದೆ ಎಂದು ಹೇಳಿ ಹೋಗಿದ್ದಾರೆ. ಬಹಳಸಮಯವಾದರೂ ಹೊರಗೆ ಬಂದಿಲ್ಲವೆಂದು ಆತಂಕಗೊಂಡ ತಾಯಿ ಮತ್ತು ತಂಗಿಯರು ರೂಮಿನ ಒಳಗೆ ಹೋಗಿ ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ: </strong>ಇಲ್ಲಿನ ಬಸವೇಶ್ವರ ನಗರದಲ್ಲಿ ಪತಿಯ ಸಾವಿನಿಂದ ಮನನೊಂದ ಮೂರು ತಿಂಗಳ ಗರ್ಭಿಣಿಯಾಗಿದ್ದ ಪತ್ನಿ ಗುರುವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಬೆಸ್ಕಾಂ ವಿಭಾಗೀಯ ಕಚೇರಿಯಲ್ಲಿ ಸಹಾಯಕರಾಗಿದ್ದ ನಂದಿನಿ (28) ಆತ್ಮಹತ್ಯೆ ಮಾಡಿಕೊಂಡವರು.</p>.<p>ತಂದೆ ಶಾಂತಮಲ್ಲಪ್ಪ ಅವರು ಕೆಇಬಿಯಲ್ಲಿ ಲೈನ್ಮನ್ ಆಗಿದ್ದು, ಕೆಲಸದಲ್ಲಿ ಇರುವಾಗಲೇ ತೀರಿಕೊಂಡಿ<br />ದ್ದರು. ಅನುಕಂಪದ ಆಧಾರದ ಮೇಲೆ ನಂದಿನಿ ಅವರಿಗೆ 3 ವರ್ಷಗಳ ಹಿಂದೆ ಬೆಸ್ಕಾಂನಲ್ಲಿ ತಂದೆಯ ಕೆಲಸ ಸಿಕ್ಕಿತ್ತು.</p>.<p>ಎರಡು ವರ್ಷದ ಹಿಂದೆ ಮೈಸೂರು ಮೂಲದ ಉದ್ಯಮಿ ಸತೀಶ್ ಎಂಬುವರನ್ನು ಪ್ರೀತಿಸಿ ವಿವಾಹವಾಗಿದ್ದರು. ಇಲ್ಲಿನ ಬಸವೇಶ್ವರ ನಗರದಲ್ಲಿ ಮನೆ ಮಾಡಿಕೊಂಡು ನೆಲೆಸಿದ್ದರು. ಸತೀಶ್ ತಾಯಿ ಮೈಸೂರಿನಲ್ಲಿ ನೆಲೆಸಿದ್ದರು.</p>.<p>ಒಂದು ವಾರದ ಹಿಂದೆ ಸತೀಶ್ ತಾಯಿ ಕೊರೊನಾ ಸೋಂಕಿಗೆ ಬಲಿಯಾಗಿದ್ದರು. ಸತೀಶ್ಗೂ ಸೋಂಕು ದೃಢಪಟ್ಟು ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಮೂರು ದಿನಗಳ ಹಿಂದೆಯಷ್ಟೇ ಮೃತಪಟ್ಟಿದ್ದರು.ಪತಿಯ ಸಾವಿನ ನಂತರ ನಂದಿನಿ ಮಾನಸಿಕವಾಗಿ ನೊಂದಿದ್ದರು.ಗುರುವಾರ ಮಧ್ಯಾಹ್ನ ಸುಮಾರು 1 ಗಂಟೆಯಲ್ಲಿ ರೂಂನಲ್ಲಿ ಕೆಲಸವಿದೆ ಎಂದು ಹೇಳಿ ಹೋಗಿದ್ದಾರೆ. ಬಹಳಸಮಯವಾದರೂ ಹೊರಗೆ ಬಂದಿಲ್ಲವೆಂದು ಆತಂಕಗೊಂಡ ತಾಯಿ ಮತ್ತು ತಂಗಿಯರು ರೂಮಿನ ಒಳಗೆ ಹೋಗಿ ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>