ತಾಲ್ಲೂಕಿನ ಬೆಳಕೆರೆ ಗ್ರಾಮದ ಎಂ.ರಾಜು (63) ಮೃತರು. ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರಾಮನಗರ ಜಿಲ್ಲಾ ಉಪ ನಿರ್ದೇಶಕರಾಗಿ ಕೆಲಸ ಮಾಡಿ ನಿವೃತ್ತರಾಗಿದ್ದರು. ಸದ್ಯ ತಾಲ್ಲೂಕಿನ ಮತ್ತೀಕೆರೆ ಶೆಟ್ಟಿಹಳ್ಳಿಯಲ್ಲಿ ಕುಟುಂಬಸ ಸಮೇತ ವಾಸವಿದ್ದರು. ಗುರುವಾರ (ಫೆ.29)ರಂದು ಬೆಳಿಗ್ಗೆ ಗ್ರಾಮದಿಂದ ಬೆಳಕೆರೆ ಮಾರ್ಗವಾಗಿ ಮುದಗೆರೆ ಸಸ್ಯ ಕ್ಷೇತ್ರದ ಕಡೆಗೆ ವಾಕಿಂಗ್ ಹೋಗಿದ್ದ ವೇಳೆ ನಾಲ್ಕು ಕಾಡಾನೆಗಳು ಹಠಾತ್ ದಾಳಿ ನಡೆಸಿದ್ದವು. ತಲೆ, ಕಣ್ಣು, ಬಲಗೈ, ಪಕ್ಕೆಲುಬು ಮುರಿದು ಗಂಭೀರವಾಗಿ ಗಾಯಗೊಂಡಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಮುದಗೆರೆ ಬಳಿ ಚಾಮುಂಡೇಶ್ವರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮೃತರಿಗೆ ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ. ಸೋಮವಾರ ಬೆಳಿಗ್ಗೆ ಬೆಳಕೆರೆ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.