<p><strong>ರಾಮನಗರ:</strong> ತಾಲ್ಲೂಕಿನ ಕೆಂಪನಹಳ್ಳಿ ಗ್ರಾಮದಲ್ಲಿ ಕಾಡಾನೆ ತುಳಿದು ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗ್ರಾಮದ ನೀರಗಂಟಿ ತಿಮ್ಮಣ್ಣ ಕಾಡಾನೆ ದಾಳಿಗೊಳಗಾದವರು.</p><p>ಬೆಳಿಗ್ಗೆ ಮನೆಗಳಿಗೆ ನೀರು ಪೂರೈಕೆ ಮಾಡಲು ಗ್ರಾಮದ ಬಳಿಯಿರುವ ಕೊಳವೆಬಾವಿಯ ಸ್ವಿಚ್ ಆನ್ ಮಾಡಲು ಹೋದಾಗ, ಕಾಡಾನೆಯೊಂದು ಏಕಾಏಕಿ ಬಂದು ದಾಳಿ ಮಾಡಿದೆ.</p><p>ಘಟನೆಯಲ್ಲಿ ತಿಮ್ಮಣ್ಣನ ಕಾಲುಗಳಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಚಿಕಿತ್ಸೆಗಾಗಿ ಅವರನ್ನು ಬಿಡದಿಯ ಭರತ್ ಕೆಂಪಣ್ಣ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ:</strong> ತಾಲ್ಲೂಕಿನ ಕೆಂಪನಹಳ್ಳಿ ಗ್ರಾಮದಲ್ಲಿ ಕಾಡಾನೆ ತುಳಿದು ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗ್ರಾಮದ ನೀರಗಂಟಿ ತಿಮ್ಮಣ್ಣ ಕಾಡಾನೆ ದಾಳಿಗೊಳಗಾದವರು.</p><p>ಬೆಳಿಗ್ಗೆ ಮನೆಗಳಿಗೆ ನೀರು ಪೂರೈಕೆ ಮಾಡಲು ಗ್ರಾಮದ ಬಳಿಯಿರುವ ಕೊಳವೆಬಾವಿಯ ಸ್ವಿಚ್ ಆನ್ ಮಾಡಲು ಹೋದಾಗ, ಕಾಡಾನೆಯೊಂದು ಏಕಾಏಕಿ ಬಂದು ದಾಳಿ ಮಾಡಿದೆ.</p><p>ಘಟನೆಯಲ್ಲಿ ತಿಮ್ಮಣ್ಣನ ಕಾಲುಗಳಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಚಿಕಿತ್ಸೆಗಾಗಿ ಅವರನ್ನು ಬಿಡದಿಯ ಭರತ್ ಕೆಂಪಣ್ಣ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>