<p><strong>ಚನ್ನಪಟ್ಟಣ</strong>: ತಾಲ್ಲೂಕಿನ ಹರಿಸಂದ್ರ ಹಾಗೂ ನೀಲಸಂದ್ರ ಗ್ರಾಮಗಳ ತೋಟಗಳಲ್ಲಿ ಗುರುವಾರ ರಾತ್ರಿ ಐದಾರು ಕಾಡಾನೆಗಳ ಹಿಂಡು ದಾಳಿ ನಡೆಸಿ ತೆಂಗು, ರಾಗಿ, ಟೊಮ್ಯಾಟೊ ಬೆಳೆಗಳನ್ನು ಧ್ವಂಸ ಮಾಡಿವೆ.</p>.<p>ನೀಲಸಂದ್ರ ಗ್ರಾಮದ ದೊಡ್ಡಸಿದ್ದಯ್ಯ ಅವರ ತೆಂಗು ಮತ್ತು ಟೊಮ್ಯಾಟೊ ಬೆಳೆ, ಹರಿಸಂದ್ರ ಗ್ರಾಮದ ರಮೇಶ್ ಅವರ ರಾಗಿ ಬೆಳೆ ಆನೆಗಳ ದಾಳಿಗೆ ಸಂಪೂರ್ಣ ಧ್ವಂಸವಾಗಿವೆ. ಇದರ ಜೊತೆಗೆ ಅಕ್ಕಪಕ್ಕದ ಜಮೀನಿನಲ್ಲಿ ಬೆಳೆದಿದ್ದ ಬೆಳೆಗಳ ಮೇಲೂ ಆನೆಗಳು ದಾಳಿ ಮಾಡಿವೆ. ಇದರಿಂದ ₹2 ಲಕ್ಷಕ್ಕೂ ಹೆಚ್ಚು ಮೌಲ್ಯದ ಬೆಳೆಗಳು ಧ್ವಂಸವಾಗಿವೆ ಎಂದು ಅಂದಾಜಿಸಲಾಗಿದೆ.</p>.<p>ತೆಂಗಿನಕಲ್ಲು ಅರಣ್ಯಪ್ರದೇಶದಿಂದ ಆಗಮಿಸಿರುವ ಆನೆಗಳ ಹಿಂಡು ರಾತ್ರಿಯ ವೇಳೆ ರೈತರ ಬೆಳೆಗಳ ಮೇಲೆ ದಾಳಿ ಮಾಡುತ್ತಿವೆ. ಅರಣ್ಯ ಇಲಾಖೆ ಅಧಿಕಾರಿಗಳಿಗೆ ಈ ವಿಚಾರ ತಿಳಿಸಿದ್ದರೂ ಅವರು ಕ್ರಮ ಕೈಗೊಂಡಿಲ್ಲ. ಬೆಳೆಗಳನ್ನು ಕಳೆದುಕೊಂಡಿರುವ ರೈತರಿಗೆ ಸರ್ಕಾರ ಪರಿಹಾರ ನೀಡಬೇಕು. ಜೊತೆಗೆ ಆನೆಗಳನ್ನು ಕಾಡಿಗೆ ಶಾಶ್ವತವಾಗಿ ಅಟ್ಟಬೇಕು ಎಂದು ಈ ಭಾಗದ ರೈತರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ</strong>: ತಾಲ್ಲೂಕಿನ ಹರಿಸಂದ್ರ ಹಾಗೂ ನೀಲಸಂದ್ರ ಗ್ರಾಮಗಳ ತೋಟಗಳಲ್ಲಿ ಗುರುವಾರ ರಾತ್ರಿ ಐದಾರು ಕಾಡಾನೆಗಳ ಹಿಂಡು ದಾಳಿ ನಡೆಸಿ ತೆಂಗು, ರಾಗಿ, ಟೊಮ್ಯಾಟೊ ಬೆಳೆಗಳನ್ನು ಧ್ವಂಸ ಮಾಡಿವೆ.</p>.<p>ನೀಲಸಂದ್ರ ಗ್ರಾಮದ ದೊಡ್ಡಸಿದ್ದಯ್ಯ ಅವರ ತೆಂಗು ಮತ್ತು ಟೊಮ್ಯಾಟೊ ಬೆಳೆ, ಹರಿಸಂದ್ರ ಗ್ರಾಮದ ರಮೇಶ್ ಅವರ ರಾಗಿ ಬೆಳೆ ಆನೆಗಳ ದಾಳಿಗೆ ಸಂಪೂರ್ಣ ಧ್ವಂಸವಾಗಿವೆ. ಇದರ ಜೊತೆಗೆ ಅಕ್ಕಪಕ್ಕದ ಜಮೀನಿನಲ್ಲಿ ಬೆಳೆದಿದ್ದ ಬೆಳೆಗಳ ಮೇಲೂ ಆನೆಗಳು ದಾಳಿ ಮಾಡಿವೆ. ಇದರಿಂದ ₹2 ಲಕ್ಷಕ್ಕೂ ಹೆಚ್ಚು ಮೌಲ್ಯದ ಬೆಳೆಗಳು ಧ್ವಂಸವಾಗಿವೆ ಎಂದು ಅಂದಾಜಿಸಲಾಗಿದೆ.</p>.<p>ತೆಂಗಿನಕಲ್ಲು ಅರಣ್ಯಪ್ರದೇಶದಿಂದ ಆಗಮಿಸಿರುವ ಆನೆಗಳ ಹಿಂಡು ರಾತ್ರಿಯ ವೇಳೆ ರೈತರ ಬೆಳೆಗಳ ಮೇಲೆ ದಾಳಿ ಮಾಡುತ್ತಿವೆ. ಅರಣ್ಯ ಇಲಾಖೆ ಅಧಿಕಾರಿಗಳಿಗೆ ಈ ವಿಚಾರ ತಿಳಿಸಿದ್ದರೂ ಅವರು ಕ್ರಮ ಕೈಗೊಂಡಿಲ್ಲ. ಬೆಳೆಗಳನ್ನು ಕಳೆದುಕೊಂಡಿರುವ ರೈತರಿಗೆ ಸರ್ಕಾರ ಪರಿಹಾರ ನೀಡಬೇಕು. ಜೊತೆಗೆ ಆನೆಗಳನ್ನು ಕಾಡಿಗೆ ಶಾಶ್ವತವಾಗಿ ಅಟ್ಟಬೇಕು ಎಂದು ಈ ಭಾಗದ ರೈತರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>