<p><strong>ಕನಕಪುರ</strong>: ಅರಣ್ಯದಲ್ಲಿ ಅಕ್ರಮವಾಗಿ ವನ್ಯಜೀವಿ ಬೇಟೆಯಾಡಿ ಸಾಗಿಸುತ್ತಿದ್ದ ನಾಲ್ವರನ್ನು ಅರಣ್ಯ ಇಲಾಖೆ ಸಿಐಡಿ ಘಟಕ ಮತ್ತು ಸಂಚಾರ ದಳವು ಬಂಧಿಸಿದೆ.</p>.<p>ಕೊಳ್ಳೇಗಾಲ ಅರಣ್ಯ ಪ್ರದೇಶದಲ್ಲಿ ಮುಳ್ಳಂದಿಯನ್ನು ಕೊಂದು ಕಾರಿನಲ್ಲಿ ಸಾಗಿಸುತ್ತಿದ್ದ ಆರೋಪಿಗಳ ಮೇಲೆ ಬುಧವಾರ ಸಾತನೂರಿನಲ್ಲಿ ಅರಣ್ಯ ಸಿಬ್ಬಂದಿ ದಾಳಿ ನಡೆಸಿತು. ಎರಡು ದೇಶಿ ಬಂದೂಕು, ಮದ್ದು, ಗುಂಡು ಮತ್ತು ಇತರ ಆಯುಧಗಳನ್ನು ಅಧಿಕಾರಿಗಳು ವಶಕ್ಕೆ ಪಡೆದರು.</p>.<p>ಉಯ್ಯಂಬಳ್ಳಿ ಹೋಬಳಿ ನಲ್ಲಳ್ಳಿ ಗ್ರಾಮದ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. </p>.<p>ಅರಣ್ಯದಲ್ಲಿ ಅಕ್ರಮವಾಗಿ ವನ್ಯಜೀವಿಯನ್ನು ಬೇಟೆಯಾಡಿ ಸಾಗಿಸುತ್ತಿದ್ದಾಗ ಅರಣ್ಯ ಇಲಾಖೆ ಸಿಐಡಿ ಘಟಕ ಮತ್ತು ಅರಣ್ಯ ಸಂಚಾರಿ ದಳ ದಾಳಿ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.</p>.<p>ಕೊಳ್ಳೇಗಾಲ ಅರಣ್ಯ ಪ್ರದೇಶದಲ್ಲಿ ಮುಳ್ಳಂದಿಯನ್ನು ಬೇಟೆಯಾಡಿ ಅದನ್ನು ಕಾರಿನಲ್ಲಿ ಸಾಗಿಸುತ್ತಿದ್ದಾಗ ಬುಧವಾರ ಸಾತನೂರಿನಲ್ಲಿ ಅರಣ್ಯ ಸಂಚಾರಿ ದಳವು ದಾಳಿ ನಡೆಸಿದೆ.</p>.<p>ದಾಳಿ ವೇಳೆ ಸ್ವಿಫ್ಟ್ ಕಾರಿನಲ್ಲಿ ಒಂದು ಮುಳ್ಳಂದಿ, ಎರಡು ನಾಡ ಬಂದೂಕು, ಬೇಟೆಗೆ ಬಳಸಿದಂತಹ ಮದ್ದು, ಗುಂಡು ಹಾಗೂ ಆಯುಧಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.</p>.<p>ಅರಣ್ಯದಲ್ಲಿ ಅಕ್ರಮವಾಗಿ ಬೇಟೆಯಾಡಿದಂತಹ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಉಯ್ಯಂಬಳ್ಳಿ ಹೋಬಳಿ ನಲ್ಲಳ್ಳಿ ಗ್ರಾಮದವರೆಂದು ತಿಳಿದು ಬಂದಿದೆ.</p>.<p>ಅರಣ್ಯ ಅಧಿಕಾರಿಗಳು ಬಂಧಿತ ಆರೋಪಿಗಳ ವಿರುದ್ಧ ಅರಣ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ</strong>: ಅರಣ್ಯದಲ್ಲಿ ಅಕ್ರಮವಾಗಿ ವನ್ಯಜೀವಿ ಬೇಟೆಯಾಡಿ ಸಾಗಿಸುತ್ತಿದ್ದ ನಾಲ್ವರನ್ನು ಅರಣ್ಯ ಇಲಾಖೆ ಸಿಐಡಿ ಘಟಕ ಮತ್ತು ಸಂಚಾರ ದಳವು ಬಂಧಿಸಿದೆ.</p>.<p>ಕೊಳ್ಳೇಗಾಲ ಅರಣ್ಯ ಪ್ರದೇಶದಲ್ಲಿ ಮುಳ್ಳಂದಿಯನ್ನು ಕೊಂದು ಕಾರಿನಲ್ಲಿ ಸಾಗಿಸುತ್ತಿದ್ದ ಆರೋಪಿಗಳ ಮೇಲೆ ಬುಧವಾರ ಸಾತನೂರಿನಲ್ಲಿ ಅರಣ್ಯ ಸಿಬ್ಬಂದಿ ದಾಳಿ ನಡೆಸಿತು. ಎರಡು ದೇಶಿ ಬಂದೂಕು, ಮದ್ದು, ಗುಂಡು ಮತ್ತು ಇತರ ಆಯುಧಗಳನ್ನು ಅಧಿಕಾರಿಗಳು ವಶಕ್ಕೆ ಪಡೆದರು.</p>.<p>ಉಯ್ಯಂಬಳ್ಳಿ ಹೋಬಳಿ ನಲ್ಲಳ್ಳಿ ಗ್ರಾಮದ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. </p>.<p>ಅರಣ್ಯದಲ್ಲಿ ಅಕ್ರಮವಾಗಿ ವನ್ಯಜೀವಿಯನ್ನು ಬೇಟೆಯಾಡಿ ಸಾಗಿಸುತ್ತಿದ್ದಾಗ ಅರಣ್ಯ ಇಲಾಖೆ ಸಿಐಡಿ ಘಟಕ ಮತ್ತು ಅರಣ್ಯ ಸಂಚಾರಿ ದಳ ದಾಳಿ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.</p>.<p>ಕೊಳ್ಳೇಗಾಲ ಅರಣ್ಯ ಪ್ರದೇಶದಲ್ಲಿ ಮುಳ್ಳಂದಿಯನ್ನು ಬೇಟೆಯಾಡಿ ಅದನ್ನು ಕಾರಿನಲ್ಲಿ ಸಾಗಿಸುತ್ತಿದ್ದಾಗ ಬುಧವಾರ ಸಾತನೂರಿನಲ್ಲಿ ಅರಣ್ಯ ಸಂಚಾರಿ ದಳವು ದಾಳಿ ನಡೆಸಿದೆ.</p>.<p>ದಾಳಿ ವೇಳೆ ಸ್ವಿಫ್ಟ್ ಕಾರಿನಲ್ಲಿ ಒಂದು ಮುಳ್ಳಂದಿ, ಎರಡು ನಾಡ ಬಂದೂಕು, ಬೇಟೆಗೆ ಬಳಸಿದಂತಹ ಮದ್ದು, ಗುಂಡು ಹಾಗೂ ಆಯುಧಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.</p>.<p>ಅರಣ್ಯದಲ್ಲಿ ಅಕ್ರಮವಾಗಿ ಬೇಟೆಯಾಡಿದಂತಹ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಉಯ್ಯಂಬಳ್ಳಿ ಹೋಬಳಿ ನಲ್ಲಳ್ಳಿ ಗ್ರಾಮದವರೆಂದು ತಿಳಿದು ಬಂದಿದೆ.</p>.<p>ಅರಣ್ಯ ಅಧಿಕಾರಿಗಳು ಬಂಧಿತ ಆರೋಪಿಗಳ ವಿರುದ್ಧ ಅರಣ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>