<p><strong>ಮಾಗಡಿ:</strong> ಹಾಡಹಗಲೇ ಮಹಿಳೆಯೊಬ್ಬರ ದ್ವಿಚಕ್ರ ವಾಹನವನ್ನು ಹಿಂಬದಿಯಿಂದ ಅಡ್ಡಗಟ್ಟಿದ ದುಷ್ಕರ್ಮಿಗಳು ಕತ್ತಿನಲ್ಲಿದ್ದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಈ ಸಂದರ್ಭದಲ್ಲಿ ಮಹಿಳೆ ಮತ್ತು ಇಬ್ಬರು ಮಕ್ಕಳು ದ್ವಿಚಕ್ರ ವಾಹನದಿಂದ ಕೆಳಗೆ ಬಿದ್ದು ಗಂಭೀರವಾದ ಗಾಯಗೊಂಡಿದ್ದಾರೆ.</p>.<p>ಮಾಗಡಿ-ರಾಮನಗರ ಮುಖ್ಯ ರಸ್ತೆ ಗವಿನಾಗಮಂಗಲ ಗೇಟ್ ಬಳಿ ಮಂಗಳವಾರ ಬೆಳಗ್ಗೆ 9.30 ಸಮಯದಲ್ಲಿ ಈ ಘಟನೆ ನಡೆದಿದೆ. ತಾಲ್ಲೂಕಿನ ವೀರೇಗೌಡನದೊಡ್ಡಿ ಗ್ರಾಮದ ಮೂರ್ತಿನಾಯಕ್ ಎಂಬುವರ ಪತ್ನಿ ನಿರ್ಮಲ ಬಾಯಿ (36) ಸರ ಕಳೆದುಕೊಂಡವರು.</p>.<p>ತಾಲ್ಲೂಕಿನ ವೆಂಕಪ್ಪನಹಳ್ಳಿ ತಮ್ಮ ಸಂಬಂಧಿಕರ ಮದುವೆ ಕಾರ್ಯಕ್ರಮಕ್ಕೆ ನಿರ್ಮಲಾ, ಇಬ್ಬರು ಹೆಣ್ಣು ಮಕ್ಕಳಾದ ಕನಿಕಾ, ಖುಷಿ ಅವರೊಂದಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಕಪ್ಪು ಬಣ್ಣದ ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿದ ಇಬ್ಬರು ಹಿಂದಿನಿಂದ ಮಾಂಗಲ್ಯ ಸರವನ್ನು ಕಸಿದುಕೊಂಡು ಪರಾರಿಯಾಗಿದ್ದಾರೆ.</p>.<p>ಡಿವೈಎಸ್ಪಿ ಪ್ರವೀಣ್, ಇನ್ ಸ್ಪೆಕ್ಟರ್ ಜಿ.ವೈ.ಗಿರಿರಾಜ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೋಡಿ ಪರಿಶೀಲಿಸಿದರು</p>.<p><strong>ಸಿಸಿ ಟಿವಿಯಲ್ಲಿ ಕಳ್ಳರ ಸುಳಿವು:</strong> ಮಾಂಗಲ್ಯ ಸರ ಕದ್ದ ದರೋಡೆಕೋರು ಹೊಸಪೇಟೆ ವೃತ್ತದಿಂದ ಬೆಂಗಳೂರು ಮಾರ್ಗವಾಗಿ ಹೋಗಿರುವುದು ಸಿಸಿಟಿವಿ ಕ್ಯಾಮೆರಾರದಲ್ಲಿ ಸೆರೆಯಾಗಿದೆ.</p>.<p>ವಾಹನದಿಂದ ಕೆಳಗಡೆ ಬಿದ್ದ ಮಹಿಳೆ ನಿರ್ಮಲ ಹಾಗೂ ಇಬ್ಬರು ಹೆಣ್ಣು ಮಕ್ಕಳ ಕೈ, ಕಾಲುಗಳಿಗೆ ಪೆಟ್ಟಾಗಿ ಮಾಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.</p>.<p>ಈ ಬಗ್ಗೆ ಪೊಲೀಸರು ಗಂಭೀರವಾಗಿ ಪರಿಗಣಿಸಿ ಆರೋಪಿಗಳನ್ನು ಬಂಧಿಸಿ ಸಾರ್ವಜನಿಕರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕು ಎಂದು ಜಯಕರ್ನಾಟಕ ಜನಪರ ವೇದಿಕೆ ಅಧ್ಯಕ್ಷ ನಾಗೇಶ್.ಎಸ್ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಗಡಿ:</strong> ಹಾಡಹಗಲೇ ಮಹಿಳೆಯೊಬ್ಬರ ದ್ವಿಚಕ್ರ ವಾಹನವನ್ನು ಹಿಂಬದಿಯಿಂದ ಅಡ್ಡಗಟ್ಟಿದ ದುಷ್ಕರ್ಮಿಗಳು ಕತ್ತಿನಲ್ಲಿದ್ದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಈ ಸಂದರ್ಭದಲ್ಲಿ ಮಹಿಳೆ ಮತ್ತು ಇಬ್ಬರು ಮಕ್ಕಳು ದ್ವಿಚಕ್ರ ವಾಹನದಿಂದ ಕೆಳಗೆ ಬಿದ್ದು ಗಂಭೀರವಾದ ಗಾಯಗೊಂಡಿದ್ದಾರೆ.</p>.<p>ಮಾಗಡಿ-ರಾಮನಗರ ಮುಖ್ಯ ರಸ್ತೆ ಗವಿನಾಗಮಂಗಲ ಗೇಟ್ ಬಳಿ ಮಂಗಳವಾರ ಬೆಳಗ್ಗೆ 9.30 ಸಮಯದಲ್ಲಿ ಈ ಘಟನೆ ನಡೆದಿದೆ. ತಾಲ್ಲೂಕಿನ ವೀರೇಗೌಡನದೊಡ್ಡಿ ಗ್ರಾಮದ ಮೂರ್ತಿನಾಯಕ್ ಎಂಬುವರ ಪತ್ನಿ ನಿರ್ಮಲ ಬಾಯಿ (36) ಸರ ಕಳೆದುಕೊಂಡವರು.</p>.<p>ತಾಲ್ಲೂಕಿನ ವೆಂಕಪ್ಪನಹಳ್ಳಿ ತಮ್ಮ ಸಂಬಂಧಿಕರ ಮದುವೆ ಕಾರ್ಯಕ್ರಮಕ್ಕೆ ನಿರ್ಮಲಾ, ಇಬ್ಬರು ಹೆಣ್ಣು ಮಕ್ಕಳಾದ ಕನಿಕಾ, ಖುಷಿ ಅವರೊಂದಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಕಪ್ಪು ಬಣ್ಣದ ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿದ ಇಬ್ಬರು ಹಿಂದಿನಿಂದ ಮಾಂಗಲ್ಯ ಸರವನ್ನು ಕಸಿದುಕೊಂಡು ಪರಾರಿಯಾಗಿದ್ದಾರೆ.</p>.<p>ಡಿವೈಎಸ್ಪಿ ಪ್ರವೀಣ್, ಇನ್ ಸ್ಪೆಕ್ಟರ್ ಜಿ.ವೈ.ಗಿರಿರಾಜ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೋಡಿ ಪರಿಶೀಲಿಸಿದರು</p>.<p><strong>ಸಿಸಿ ಟಿವಿಯಲ್ಲಿ ಕಳ್ಳರ ಸುಳಿವು:</strong> ಮಾಂಗಲ್ಯ ಸರ ಕದ್ದ ದರೋಡೆಕೋರು ಹೊಸಪೇಟೆ ವೃತ್ತದಿಂದ ಬೆಂಗಳೂರು ಮಾರ್ಗವಾಗಿ ಹೋಗಿರುವುದು ಸಿಸಿಟಿವಿ ಕ್ಯಾಮೆರಾರದಲ್ಲಿ ಸೆರೆಯಾಗಿದೆ.</p>.<p>ವಾಹನದಿಂದ ಕೆಳಗಡೆ ಬಿದ್ದ ಮಹಿಳೆ ನಿರ್ಮಲ ಹಾಗೂ ಇಬ್ಬರು ಹೆಣ್ಣು ಮಕ್ಕಳ ಕೈ, ಕಾಲುಗಳಿಗೆ ಪೆಟ್ಟಾಗಿ ಮಾಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.</p>.<p>ಈ ಬಗ್ಗೆ ಪೊಲೀಸರು ಗಂಭೀರವಾಗಿ ಪರಿಗಣಿಸಿ ಆರೋಪಿಗಳನ್ನು ಬಂಧಿಸಿ ಸಾರ್ವಜನಿಕರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕು ಎಂದು ಜಯಕರ್ನಾಟಕ ಜನಪರ ವೇದಿಕೆ ಅಧ್ಯಕ್ಷ ನಾಗೇಶ್.ಎಸ್ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>