ಗಾಯತ್ರಿ (32) ಮೃತರು. ಅವರ ಪತಿ ಕೆಲಸದ ನಿಮಿತ್ತ ಹೊರ ಹೋಗಿದ್ದು, ಮಕ್ಕಳು ಶಾಲೆಗೆ ತೆರಳಿದ್ದರು. ಮಹಿಳೆ ಮನೆಯಲ್ಲಿ ಒಬ್ಬರೇ ಇದ್ದದ್ದನ್ನು ಗಮನಿಸಿದ ದುಷ್ಕರ್ಮಿಗಳು ಒಳಗೆ ನುಗ್ಗಿದ್ದಾರೆ. ಬಳಿಕ ಆಯುಧದಿಂದ ಮಹಿಳೆಯ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಿ, ಮನೆಯಲ್ಲಿನ ಬಂಗಾರ, ನಗದು ಇನ್ನಿತರ ವಸ್ತುಗಳನ್ನು ದೋಚಿದ್ದಾರೆ. ಸಂಜೆ ಮಕ್ಕಳು ಶಾಲೆಯಿಂದ ಮನೆಗೆ ಬಂದ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.