<p><strong>ಬಿಡದಿ</strong>: ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಸಂಸ್ಥೆಯು ಕಾನೂನು ಬಾಹಿರವಾಗಿ ಬೀಗ ಮುದ್ರೆಯನ್ನು ಘೋಷಿಸಿ 66 ಕಾರ್ಮಿಕರ ಅಮಾನತು ಮತ್ತು 8 ಕಾರ್ಮಿಕರನ್ನು ವಜಾ ಮಾಡಿದೆ. ಅಮಾನತಾದವರ ವಿಚಾರಣೆ ಕನ್ನಡದಲ್ಲಿ ನಡೆಸಬೇಕು ಎಂದು ಕಾರ್ಮಿಕರು ಒತ್ತಾಯಿಸಿದ್ದಾರೆ.</p>.<p>‘ಈಗ 66 ಕಾರ್ಮಿಕರ ಆಂತರಿಕ ವಿಚಾರಣೆ ಪ್ರಾರಂಭವಾಗಿದೆ. ವಿಚಾರಣೆಯಲ್ಲಿ ದಾಖಲೆಗಳನ್ನು ಕನ್ನಡದಲ್ಲಿ ನೀಡಬೇಕು ಹಾಗೂ ವಿಚಾರಣಾ ಪ್ರಕ್ರಿಯೆಯನ್ನು ಕನ್ನಡದಲ್ಲಿ ದಾಖಲಿಸಬೇಕೆಂದು ಕೇಳಿದರೆ, ಕನ್ನಡದಲ್ಲಿ ವಿಚಾರಣೆ ಸಾಧ್ಯವಿಲ್ಲ ಎಂದು ಆಡಳಿತ ಮಂಡಳಿ ಮತ್ತು ವಿಚಾರಣಾಧಿಕಾರಿಗಳು ತಿಳಿಸಿದ್ದಾರೆ. ಇಂಗ್ಲಿಷ್ನಲ್ಲಿ ವಿಚಾರಣೆ ನಡೆದರೆ ಸಾಮಾನ್ಯ ಕಾರ್ಮಿಕರಿಗೆ<br />ಕಾನೂನಾತ್ಮಕ ಪದಗಳು ಅರ್ಥವಾಗುವುದಿಲ್ಲ ಎಂದು ಎಷ್ಟೇ ಕೇಳಿಕೊಂಡರು ಕನ್ನಡದಲ್ಲಿ ನಡಾವಳಿ ನೀಡಲು ನಿರಾಕರಿಸುತ್ತಿದ್ದಾರೆ’ ಎಂದು ಕಾರ್ಮಿಕರು ದೂರಿದ್ದಾರೆ.</p>.<p>ಸಂಸ್ಥೆಯ ಈ ಧೋರಣೆಯನ್ನು ಖಂಡಿಸಿ ಅಮಾನತ್ತಾದ ಕಾರ್ಮಿಕರು ಬಿಡದಿ ಕೈಗಾರಿಕಾ ಪ್ರದೇಶದ ಅಸೋಸಿಯೇಷನ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ವಿಚಾರಣೆಯನ್ನು ಕನ್ನಡದಲ್ಲಿ ನಡೆಸಬೇಕೆಂದು ಮತ್ತು ನಡಾವಳಿಯನ್ನು ಸರಳ<br />ಕನ್ನಡದಲ್ಲಿ ನೀಡಬೇಕೆಂದು ಒತ್ತಾಯಿಸಿದರು.</p>.<p>‘ಇದಕ್ಕೆ ತಪ್ಪಿದ್ದಲ್ಲಿ ಟಿಕೆಎಂ ಸಂಸ್ಥೆಯ ಕನ್ನಡ ವಿರೋಧಿ ನೀತಿ ಮುಂದುವರೆದರೆ ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಲಾಗಿದೆ’ ಎಂದು ಕಾರ್ಮಿಕ ಸಂಘಟನೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಿಡದಿ</strong>: ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಸಂಸ್ಥೆಯು ಕಾನೂನು ಬಾಹಿರವಾಗಿ ಬೀಗ ಮುದ್ರೆಯನ್ನು ಘೋಷಿಸಿ 66 ಕಾರ್ಮಿಕರ ಅಮಾನತು ಮತ್ತು 8 ಕಾರ್ಮಿಕರನ್ನು ವಜಾ ಮಾಡಿದೆ. ಅಮಾನತಾದವರ ವಿಚಾರಣೆ ಕನ್ನಡದಲ್ಲಿ ನಡೆಸಬೇಕು ಎಂದು ಕಾರ್ಮಿಕರು ಒತ್ತಾಯಿಸಿದ್ದಾರೆ.</p>.<p>‘ಈಗ 66 ಕಾರ್ಮಿಕರ ಆಂತರಿಕ ವಿಚಾರಣೆ ಪ್ರಾರಂಭವಾಗಿದೆ. ವಿಚಾರಣೆಯಲ್ಲಿ ದಾಖಲೆಗಳನ್ನು ಕನ್ನಡದಲ್ಲಿ ನೀಡಬೇಕು ಹಾಗೂ ವಿಚಾರಣಾ ಪ್ರಕ್ರಿಯೆಯನ್ನು ಕನ್ನಡದಲ್ಲಿ ದಾಖಲಿಸಬೇಕೆಂದು ಕೇಳಿದರೆ, ಕನ್ನಡದಲ್ಲಿ ವಿಚಾರಣೆ ಸಾಧ್ಯವಿಲ್ಲ ಎಂದು ಆಡಳಿತ ಮಂಡಳಿ ಮತ್ತು ವಿಚಾರಣಾಧಿಕಾರಿಗಳು ತಿಳಿಸಿದ್ದಾರೆ. ಇಂಗ್ಲಿಷ್ನಲ್ಲಿ ವಿಚಾರಣೆ ನಡೆದರೆ ಸಾಮಾನ್ಯ ಕಾರ್ಮಿಕರಿಗೆ<br />ಕಾನೂನಾತ್ಮಕ ಪದಗಳು ಅರ್ಥವಾಗುವುದಿಲ್ಲ ಎಂದು ಎಷ್ಟೇ ಕೇಳಿಕೊಂಡರು ಕನ್ನಡದಲ್ಲಿ ನಡಾವಳಿ ನೀಡಲು ನಿರಾಕರಿಸುತ್ತಿದ್ದಾರೆ’ ಎಂದು ಕಾರ್ಮಿಕರು ದೂರಿದ್ದಾರೆ.</p>.<p>ಸಂಸ್ಥೆಯ ಈ ಧೋರಣೆಯನ್ನು ಖಂಡಿಸಿ ಅಮಾನತ್ತಾದ ಕಾರ್ಮಿಕರು ಬಿಡದಿ ಕೈಗಾರಿಕಾ ಪ್ರದೇಶದ ಅಸೋಸಿಯೇಷನ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ವಿಚಾರಣೆಯನ್ನು ಕನ್ನಡದಲ್ಲಿ ನಡೆಸಬೇಕೆಂದು ಮತ್ತು ನಡಾವಳಿಯನ್ನು ಸರಳ<br />ಕನ್ನಡದಲ್ಲಿ ನೀಡಬೇಕೆಂದು ಒತ್ತಾಯಿಸಿದರು.</p>.<p>‘ಇದಕ್ಕೆ ತಪ್ಪಿದ್ದಲ್ಲಿ ಟಿಕೆಎಂ ಸಂಸ್ಥೆಯ ಕನ್ನಡ ವಿರೋಧಿ ನೀತಿ ಮುಂದುವರೆದರೆ ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಲಾಗಿದೆ’ ಎಂದು ಕಾರ್ಮಿಕ ಸಂಘಟನೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>