ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಣ್ಣಿನ ರಾಶಿ ಕುಸಿದು ಇಬ್ಬರು ಕಾರ್ಮಿಕರ ಸಾವು

Last Updated 11 ಫೆಬ್ರುವರಿ 2020, 10:26 IST
ಅಕ್ಷರ ಗಾತ್ರ

ರಾಮನಗರ: ಒಳಚರಂಡಿ ಪೈಪ್‌ಲೈನ್‌ ಕಾಮಗಾರಿ ವೇಳೆ ಮಣ್ಣಿನ ರಾಶಿ ಕುಸಿದು ಕಾರ್ಮಿಕರಿಬ್ಬರು ಮೃತ ಪಟ್ಟ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಹಳೇಭೈರೋಹಳ್ಳಿ ಸಮೀಪದ ಕೆಂಪೇಗೌಡ ಲೇಔಟ್ ನಲ್ಲಿ ಸೋಮವಾರ ಸಂಜೆ ನಡೆಯಿತು.

ಆಂಧ್ರಪ್ರದೇಶದ ಕರಿಯಪ್ಪ (36) ಹಾಗೂ ಬಿಹಾರದ ನಿಖಿಲೇಶ್ (32) ಮೃತರು. ಇವರು ಪೈಪ್‌ಲೈನ್‌ ಕಾಮಗಾರಿಗಾಗಿ ಮಣ್ಣು ತೆಗೆಯುವ ಕಾರ್ಯದಲ್ಲಿ ನಿರತರಾಗಿದ್ದರು. ಆಳೆತ್ತರದ ಗುಂಡಿಯಿಂದ ಮಣ್ಣನ್ನು ಮೇಲಕ್ಕೆ ಎತ್ತುವ ವೇಳೆ ಮೇಲಿದ್ದ ಮಣ್ಣು ಏಕಾಏಕಿ ಇವರ ಮೇಲೆ ಕುಸಿದು ಬಿತ್ತು.

ಮಣ್ಣಿನ ರಾಶಿಯಲ್ಲಿ ಸಿಲುಕಿದ ಅವರು ಸ್ಥಳದಲ್ಲೇ ಮೃತಪಟ್ಟರು. ಜೆಸಿಬಿ ಮೂಲಕ ಮೃತ ದೇಹಗಳನ್ನು ಹೊರತೆಗೆದು ಬೆಂಗಳೂರಿನ ರಾಜರಾಜೇಶ್ವರಿ ಆಸ್ಪತ್ರೆಗೆ ರವಾನಿಸಲಾಯಿತು. ಕುಂಬಳಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT