ಕಾರ್ಮಿಕರನ್ನು ಜೀತದಾಳುಗಳಂತೆ ದುಡಿಸಿಕೊಳ್ಳಲಾಗುತ್ತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಮಾಗಡಿ ತಹಶೀಲ್ದಾರ್ ನರಸಿಂಹಮೂರ್ತಿ ಸೂಚನೆ ಮೇರೆಗೆ ಕಂದಾಯ ನಿರೀಕ್ಷಕ ರೆಹಮಾನ್, ಗ್ರಾಮ ಲೆಕ್ಕಾಧಿಕಾರಿ ಸುರೇಶ್ಕುಮಾರ್ ಹಾಗೂ ಕಾರ್ಮಿಕ ಇಲಾಖೆ ನಿರೀಕ್ಷಕರಾದ ಸುಷ್ಮಾ ನೇತೃತ್ವದಲ್ಲಿ ಅಧಿಕಾರಿಗಳ ತಂಡವು ಇದೇ ತಿಂಗಳ 8ರಂದು ದಾಳಿ ನಡೆಸಿತು. ಇಂಟರ್ ನ್ಯಾಷನಲ್ ಜಸ್ಟಿಸ್ ಮಿಷನ್ ಸಿಬ್ಬಂದಿ ಸಾಥ್ ನೀಡಿದರು.