ಈ ಇಬ್ಬರು ಕೂಲಿ ಕಾರ್ಮಿಕರನ್ನು ಗಮನಿಸಿದ ಬಿಜೆಪಿ ಮುಖಂಡರು ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದರು. ಇಬ್ಬರನ್ನೂ ವೈದ್ಯರು ತಪಾಸಣೆಗೆ ಒಳಪಡಿಸಿದ್ದು, ಊಟ ನೀಡಲಾಯಿತು. ಊಟಕ್ಕಾಗಿ ಅಲೆಯುತ್ತ ಇಂದಿರಾ ಕ್ಯಾಂಟೀನ್ಗೆ ಬಂದಿದ್ದ ಐವರು ಕಾರ್ಮಿಕರನ್ನು ಪುನರ್ ವಸತಿ ಕೇಂದ್ರಕ್ಕೆ ದಾಖಲು ಮಾಡಲಾಗಿದೆ. ಐವರು ಕಾರ್ಮಿಕರು ಊಟ ಮಾಡಲೆಂದು ಕ್ಯಾಂಟೀನ್ ಗೆ ಬಂದಿದ್ದರು. ಆದರೆ ಅಷ್ಟರಲ್ಲೇ ಊಟ ಖಾಲಿಯಾಗಿತ್ತು. ಇದನ್ನು ಗಮನಿಸಿದ ನಗರಸಭೆ ಸಿಬ್ಬಂದಿ ಅವರನ್ನು ಜಿಲ್ಲಾ ಆಸ್ಪತ್ರೆಗೆ ಕರೆ ತಂದರು. ಅಲ್ಲಿಂದ ಅವರನ್ನು ಪುನರ್ವಸತಿ ಕೇಂದ್ರಕ್ಕೆ ಕಳುಹಿಸಲಾಯಿತು.ಈ ಕಾರ್ಮಿಕರು ಮದ್ದೂರು, ಮಂಡ್ಯ ಮೊದಲಾದ ಕಡೆಯಿಂದ ಬಂದವಾರಾಗಿದ್ದಾರೆ.