<p><strong>ಚನ್ನಪಟ್ಟಣ:</strong> ತಾಲ್ಲೂಕಿನ ಬೆಳಕೆರೆ ಬಳಿಯ ಸಂಪೂರ್ಣ ಕೃಷಿ ಮತ್ತು ಇಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಶನಿವಾರ ವಿದ್ಯಾರ್ಥಿಗಳ ಬೌದ್ಧಿಕ ಮಟ್ಟ ಹೆಚ್ಚಿಸುವ ಕುರಿತ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. </p>.<p>ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ ಮತ್ತು ಚಿಂತನೆ ಸಾಮರ್ಥ್ಯ ಹೆಚ್ಚಿಸುವುದು ಅವಶ್ಯಕ. ವಿದ್ಯಾರ್ಥಿಗಳ ಸೃಜನಶೀಲತೆ ಉತ್ತೇಜಿಸಲು ಬೌದ್ಧಿಕ ಆಸ್ತಿ ಹಕ್ಕುಗಳು (ಐಪಿಆರ್) ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ ಎಂದು ಸಂಸ್ಥೆಯ ಉಪಾಧ್ಯಕ್ಷೆ ಡಾ.ಸಂಪೂರ್ಣ ನಾಯ್ಡು ಅಭಿಪ್ರಾಯಪಟ್ಟರು.</p>.<p>ಬೌದ್ಧಿಕ ಆಸ್ತಿ ಹಕ್ಕುಗಳ ಕುರಿತು ತಿಳಿವಳಿಕೆ, ಹೊಸ ಸೃಷ್ಟಿ, ಕಾನೂನು ರಕ್ಷಣೆ ಮತ್ತಷ್ಟು ಆವಿಷ್ಕಾರ ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಕೌನ್ಸಿಲ್ ಕಾರ್ಯಕಾರಿ ಸಮಿತಿ ಕಾರ್ಯದರ್ಶಿ ಡಾ.ಯು.ಟಿ. ವಿಜಯ್ ಹೇಳಿದರು.<br><br>ಕಾಲೇಜು ಮುಖ್ಯಸ್ಥ ಎಸ್.ವಿ. ವಾಸುದೇವನ್, ಪ್ರಾಂಶುಪಾಲ ವಿನಯ್ ಬಿ.ರಾಘವೇಂದ್ರ, ಸಲಹೆಗಾರರಾದ ಸರಸಿಜ ಪದ್ಮನಾಭನ್, ಪ್ರಾಜೆಕ್ಟ್ ಎಂಜಿನಿಯರ್ ವಿನೀತ್ ಕುಮಾರ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ:</strong> ತಾಲ್ಲೂಕಿನ ಬೆಳಕೆರೆ ಬಳಿಯ ಸಂಪೂರ್ಣ ಕೃಷಿ ಮತ್ತು ಇಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಶನಿವಾರ ವಿದ್ಯಾರ್ಥಿಗಳ ಬೌದ್ಧಿಕ ಮಟ್ಟ ಹೆಚ್ಚಿಸುವ ಕುರಿತ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. </p>.<p>ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ ಮತ್ತು ಚಿಂತನೆ ಸಾಮರ್ಥ್ಯ ಹೆಚ್ಚಿಸುವುದು ಅವಶ್ಯಕ. ವಿದ್ಯಾರ್ಥಿಗಳ ಸೃಜನಶೀಲತೆ ಉತ್ತೇಜಿಸಲು ಬೌದ್ಧಿಕ ಆಸ್ತಿ ಹಕ್ಕುಗಳು (ಐಪಿಆರ್) ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ ಎಂದು ಸಂಸ್ಥೆಯ ಉಪಾಧ್ಯಕ್ಷೆ ಡಾ.ಸಂಪೂರ್ಣ ನಾಯ್ಡು ಅಭಿಪ್ರಾಯಪಟ್ಟರು.</p>.<p>ಬೌದ್ಧಿಕ ಆಸ್ತಿ ಹಕ್ಕುಗಳ ಕುರಿತು ತಿಳಿವಳಿಕೆ, ಹೊಸ ಸೃಷ್ಟಿ, ಕಾನೂನು ರಕ್ಷಣೆ ಮತ್ತಷ್ಟು ಆವಿಷ್ಕಾರ ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಕೌನ್ಸಿಲ್ ಕಾರ್ಯಕಾರಿ ಸಮಿತಿ ಕಾರ್ಯದರ್ಶಿ ಡಾ.ಯು.ಟಿ. ವಿಜಯ್ ಹೇಳಿದರು.<br><br>ಕಾಲೇಜು ಮುಖ್ಯಸ್ಥ ಎಸ್.ವಿ. ವಾಸುದೇವನ್, ಪ್ರಾಂಶುಪಾಲ ವಿನಯ್ ಬಿ.ರಾಘವೇಂದ್ರ, ಸಲಹೆಗಾರರಾದ ಸರಸಿಜ ಪದ್ಮನಾಭನ್, ಪ್ರಾಜೆಕ್ಟ್ ಎಂಜಿನಿಯರ್ ವಿನೀತ್ ಕುಮಾರ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>