ನಂತರ ಮಾತನಾಡಿದ ಕುಮಾರಸ್ವಾಮಿ, ಭಾಗವತ ಪುರಾಣದ ಪ್ರಕಾರ ಕಾರ್ತಿಕ ಶುಕ್ಲ ಪಾಡ್ಯಮಿಯು ಶ್ರೀಕೃಷ್ಣ ಪರಮಾತ್ಮ ಇಂದ್ರನನ್ನು ಸೋಲಿಸಿದ ದಿನವೂ ಹೌದು. ಇಂದ್ರನ ದಾಳಿಯಿಂದ ತನ್ನ ಗೋವುಗಳ ಸಮೂಹ ರಕ್ಷಿಸಲು ಗೋಪಾಲನು ಗೋವರ್ಧನ ಗಿರಿಯನ್ನೆತ್ತಿದ ದಿನವಿದು. ಆದ್ದರಿಂದಲೇ ಇಂದು ಗೋಪೂಜೆ ಮತ್ತು ಗೋವರ್ಧನ ಪೂಜೆ ಆಚರಿಸಲಾಗುತ್ತದೆ. ಕೆಲವೆಡೆ ರೈತರು ಇದನ್ನು ಹಟ್ಟಿ ಹಬ್ಬವೆಂದು ಆಚರಿಸುತ್ತಾರೆ ಎಂದರು.