<h2><span style="font-size:24px;"><strong>ಕೋಡಿಹಳ್ಳಿ (ಕನಕಪುರ): </strong>‘ವರ್ಷವಿಡೀ ಓದಿರುವುದನ್ನು ಒರೆಗೆ ಹಚ್ಚುವ ಸಲುವಾಗಿ ವರ್ಷದ ಕೊನೆಯಲ್ಲಿ ಪರೀಕ್ಷೆ ನಡೆಸುತ್ತಾರೆ. ಅದಕ್ಕೆ ವಿದ್ಯಾರ್ಥಿಗಳು ಹೆದರುವ ಅವಶ್ಯಕತೆಯಿಲ್ಲ. ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ’ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಸ್.ಎಂ.ಕೃಷ್ಣಮೂರ್ತಿ ತಿಳಿಸಿದರು. </span></h2>.<h2><span style="font-size:24px;">ಇಲ್ಲಿನ ಕೋಡಿಹಳ್ಳಿ ಗ್ರಾಮದಲ್ಲಿನ ಶ್ರೀ ಶಾರದ ಪ್ರೌಢಶಾಲೆ ಆವರಣದಲ್ಲಿ ಗ್ರಾಮ ಪಂಚಾಯ್ತಿ ಸಹಯೋಗದಲ್ಲಿ ಶಿಕ್ಷಣ ಇಲಾಖೆ ಮತ್ತು ಸಹ ಶಿಕ್ಷಕರ ಸಂಘ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗಾಗಿ ಬುಧವಾರ ಆಯೋಜನೆ ಮಾಡಿದ್ದ ‘ಪರೀಕ್ಷಾ ಸುಗ್ಗಿ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. </span></h2>.<h2><span style="font-size:24px;">‘ಯಾವುದೇ ಕೆಲಸದ ಅರ್ಹತೆ ಅಳತೆ ಮಾಡಲು ಒಂದು ಮಾನದಂಡವಿರುತ್ತದೆ. ಅದರಂತೆ ಶಿಕ್ಷಕರು ವರ್ಷವಿಡೀ ಕಲಿಸಿರುವ ವಿದ್ಯೆಯನ್ನು ಎಷ್ಟರ ಮಟ್ಟಿಗೆ ಕಲಿತು ಮನಸ್ಸಿನಲ್ಲಿ ಉಳಿಸಿಕೊಂಡಿದ್ದೀರಿ ಎಂಬುದನ್ನು ಅರಿಯಲು ಶಿಕ್ಷಣೆ ಇಲಾಖೆ ಪರೀಕ್ಷೆ ನಡೆಸುತ್ತದೆ. ಖುಷಿಯಿಂದ ಪರೀಕ್ಷೆ ಬರೆಯಿರಿ’ ಎಂದು ಹೇಳಿದರು. </span></h2>.<h2><span style="font-size:24px;">ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಟಿ.ಎಸ್.ಶಿವರಾಮ್ ಪರೀಕ್ಷೆಯ ಗೊಂದಲ ಮತ್ತು ಪರೀಕ್ಷಾ ಸಿದ್ದತೆ ಬಗ್ಗೆ ಮಕ್ಕಳಿಗೆ ತಿಳಿಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. </span></h2>.<h2><span style="font-size:24px;">‘ನಿಮ್ಮನ್ನು ಶಾಲೆಗೆ ಕಳಿಸಿ ಹಲವು ರೀತಿಯಲ್ಲಿ ನಿಮ್ಮ ಭವಿಷ್ಯದ ಬಗ್ಗೆ ಕನಸು ಕಾಣುತ್ತಿರುವ ಪೋಷಕರಿಗೆ ಹೆಮ್ಮೆಯ ಮಗ, ಮಗಳಾಗಿ ಉತ್ತಮ ಸಾಧನೆ ಮಾಡುವ ಮೂಲಕ ಅವರ ಕನಸುಗಳನ್ನು ಸಾಕಾರಗೊಳಿಸಬೇಕು’ ಎಂದು ಸಲಹೆ ನೀಡಿದರು. </span></h2>.<h2><span style="font-size:24px;">ಕ್ಷೇತ್ರ ಶಿಕ್ಷಣಾಧಿಕಾರಿ ವಿಜಯಲಕ್ಷ್ಮಿ, ಶಾರದ ಶಾಲೆಯ ಕಾರ್ಯದರ್ಶಿ ಬಸವರಾಜು, ಶಾಲೆಯ ಮುಖ್ಯ ಶಿಕ್ಷಕ ಪ್ರಭಾಕರ್, ಕೋಡಿಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಮೇಶ್, ಡಿಕೆಎಸ್ ಟ್ರಸ್ಟ್ ಅಧ್ಯಕ್ಷ ವಿಶ್ವನಾಥ್, ಅಪ್ಸಾ ಸುರಕ್ಷಾ ಕೇಂದ್ರದ ಬಸವರಾಜು ಇದ್ದರು.</span></h2>.<h2><span style="font-size:24px;">ಕೋಡಿಹಳ್ಳಿ ಹೋಬಳಿ ಮತ್ತು ಉಯ್ಯಂಬಳ್ಳಿ ಹೋಬಳಿ ವ್ಯಾಪ್ತಿಯಲ್ಲಿ ಬರುವ ಪ್ರೌಢಶಾಲೆಗಳ 400 ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು.</span></h2>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<h2><span style="font-size:24px;"><strong>ಕೋಡಿಹಳ್ಳಿ (ಕನಕಪುರ): </strong>‘ವರ್ಷವಿಡೀ ಓದಿರುವುದನ್ನು ಒರೆಗೆ ಹಚ್ಚುವ ಸಲುವಾಗಿ ವರ್ಷದ ಕೊನೆಯಲ್ಲಿ ಪರೀಕ್ಷೆ ನಡೆಸುತ್ತಾರೆ. ಅದಕ್ಕೆ ವಿದ್ಯಾರ್ಥಿಗಳು ಹೆದರುವ ಅವಶ್ಯಕತೆಯಿಲ್ಲ. ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ’ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಸ್.ಎಂ.ಕೃಷ್ಣಮೂರ್ತಿ ತಿಳಿಸಿದರು. </span></h2>.<h2><span style="font-size:24px;">ಇಲ್ಲಿನ ಕೋಡಿಹಳ್ಳಿ ಗ್ರಾಮದಲ್ಲಿನ ಶ್ರೀ ಶಾರದ ಪ್ರೌಢಶಾಲೆ ಆವರಣದಲ್ಲಿ ಗ್ರಾಮ ಪಂಚಾಯ್ತಿ ಸಹಯೋಗದಲ್ಲಿ ಶಿಕ್ಷಣ ಇಲಾಖೆ ಮತ್ತು ಸಹ ಶಿಕ್ಷಕರ ಸಂಘ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗಾಗಿ ಬುಧವಾರ ಆಯೋಜನೆ ಮಾಡಿದ್ದ ‘ಪರೀಕ್ಷಾ ಸುಗ್ಗಿ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. </span></h2>.<h2><span style="font-size:24px;">‘ಯಾವುದೇ ಕೆಲಸದ ಅರ್ಹತೆ ಅಳತೆ ಮಾಡಲು ಒಂದು ಮಾನದಂಡವಿರುತ್ತದೆ. ಅದರಂತೆ ಶಿಕ್ಷಕರು ವರ್ಷವಿಡೀ ಕಲಿಸಿರುವ ವಿದ್ಯೆಯನ್ನು ಎಷ್ಟರ ಮಟ್ಟಿಗೆ ಕಲಿತು ಮನಸ್ಸಿನಲ್ಲಿ ಉಳಿಸಿಕೊಂಡಿದ್ದೀರಿ ಎಂಬುದನ್ನು ಅರಿಯಲು ಶಿಕ್ಷಣೆ ಇಲಾಖೆ ಪರೀಕ್ಷೆ ನಡೆಸುತ್ತದೆ. ಖುಷಿಯಿಂದ ಪರೀಕ್ಷೆ ಬರೆಯಿರಿ’ ಎಂದು ಹೇಳಿದರು. </span></h2>.<h2><span style="font-size:24px;">ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಟಿ.ಎಸ್.ಶಿವರಾಮ್ ಪರೀಕ್ಷೆಯ ಗೊಂದಲ ಮತ್ತು ಪರೀಕ್ಷಾ ಸಿದ್ದತೆ ಬಗ್ಗೆ ಮಕ್ಕಳಿಗೆ ತಿಳಿಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. </span></h2>.<h2><span style="font-size:24px;">‘ನಿಮ್ಮನ್ನು ಶಾಲೆಗೆ ಕಳಿಸಿ ಹಲವು ರೀತಿಯಲ್ಲಿ ನಿಮ್ಮ ಭವಿಷ್ಯದ ಬಗ್ಗೆ ಕನಸು ಕಾಣುತ್ತಿರುವ ಪೋಷಕರಿಗೆ ಹೆಮ್ಮೆಯ ಮಗ, ಮಗಳಾಗಿ ಉತ್ತಮ ಸಾಧನೆ ಮಾಡುವ ಮೂಲಕ ಅವರ ಕನಸುಗಳನ್ನು ಸಾಕಾರಗೊಳಿಸಬೇಕು’ ಎಂದು ಸಲಹೆ ನೀಡಿದರು. </span></h2>.<h2><span style="font-size:24px;">ಕ್ಷೇತ್ರ ಶಿಕ್ಷಣಾಧಿಕಾರಿ ವಿಜಯಲಕ್ಷ್ಮಿ, ಶಾರದ ಶಾಲೆಯ ಕಾರ್ಯದರ್ಶಿ ಬಸವರಾಜು, ಶಾಲೆಯ ಮುಖ್ಯ ಶಿಕ್ಷಕ ಪ್ರಭಾಕರ್, ಕೋಡಿಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಮೇಶ್, ಡಿಕೆಎಸ್ ಟ್ರಸ್ಟ್ ಅಧ್ಯಕ್ಷ ವಿಶ್ವನಾಥ್, ಅಪ್ಸಾ ಸುರಕ್ಷಾ ಕೇಂದ್ರದ ಬಸವರಾಜು ಇದ್ದರು.</span></h2>.<h2><span style="font-size:24px;">ಕೋಡಿಹಳ್ಳಿ ಹೋಬಳಿ ಮತ್ತು ಉಯ್ಯಂಬಳ್ಳಿ ಹೋಬಳಿ ವ್ಯಾಪ್ತಿಯಲ್ಲಿ ಬರುವ ಪ್ರೌಢಶಾಲೆಗಳ 400 ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು.</span></h2>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>